ಸಾಂಸ್ಕೃತಿಕ

ಅ.12 ರಿಂದ ಧರ್ಮಸ್ಥಳದಲ್ಲಿ “ವೀಣೆಯ ಬೆಡಗು” : ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಅ.12 ಮತ್ತು 13 (ಶನಿವಾರ ಮತ್ತು ಭಾನುವಾರ) “ವೀಣೆಯ ಬೆಡಗು” – ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

ಅ. 12 ರಂದು ಶನಿವಾರ ಸಂಜೆ ಗಂಟೆ 4 ರಿಂದ ಪ್ರೊ. ಅರವಿಂದ ಹೆಬ್ಬಾರ್ ಮತ್ತು ಬಳಗದವರಿಂದ ವೃಂದಗಾಯನ ನಡೆಯಲಿದೆ. ವಿದ್ವಾನ್ ಕೃಷ್ಣ ಪವನ್‍ ಕುಮಾರ್ ಮೃದಂಗ ವಾದಕರಾಗಿ ಸಹಕರಿಸುವರು.

ಸಂಜೆ ಗಂಟೆ 5 ರಿಂದ ಡಾ. ಸಹನಾ, ಎಸ್.ವಿ. (ವೀಣೆ), ವಿದ್ವಾನ್ ಬಿ.ಎಸ್. ಪ್ರಶಾಂತ್ (ಮೃದಂಗ) ಮತ್ತು ವಿದ್ವಾನ್‍ ಟಿ.ಎನ್. ರಮೇಶ್ (ಘಟಂ) ಕಾರ್ಯಕ್ರಮ ನೀಡುವರು.
ಸಂಜೆ ಗಂಟೆ 7 ರಿಂದ  ಎ. ಕನ್ಯಾಕುಮಾರಿ (ಪಿಟೀಲು) ವಿದ್ವಾನ್ ಬಿ. ವಿಠಲ ರಂಗನ್ (ಸಹವಾದನ) ವಿದ್ವಾನ್‍ ಜಯಚಂದ್ರರಾವ್ (ಮೃದಂಗ), ವಿದ್ವಾನ್‍ ಎನ್. ಅಮೃತ್ (ಖಂಜರಿ) ಮತ್ತು ವಿದ್ವಾನ್ ಬಿ. ರಾಜಶೇಖರ್ (ಮೋರ್ಚಿಂಗ್) ಕಾರ್ಯಕ್ರಮ ನಡೆಸಿಕೊಡುವರು.

ಅ.13 ರಂದು ಭಾನುವಾರ ಸಂಜೆ ಗಂಟೆ 3.30 ರಿಂದ ವಿದ್ವಾನ್ ಬಾಲಸುಬ್ರಹ್ಮಣ್ಯ ಮತ್ತು ಬಳಗದವರಿಂದ ವೃಂದಗಾಯನ ನಡೆಯಲಿದೆ. ವಿದುಷಿ ಸಿ.ಎಸ್. ಉಷಾ (ಪಿಟೀಲು) ಮತ್ತು ವಿದ್ವಾನ್ ಬಿ.ಎಸ್. ಆನಂದ್ (ಮೃದಂಗ) ಸಹಕರಿಸುವರು.
ಸಂಜೆ ಗಂಟೆ 4.30 ರಿಂದ ಡಾ.ಗೀತಾ ಭಟ್‍ ಅವರಿಂದ ವೀಣಾವಾದನ ಕಾರ್ಯಕ್ರಮ ನಡೆಯಲಿದೆ.
ಸಂಜೆ 5.30 ರಿಂದ ನೀಲಾ ರಾಂಗೋಪಾಲ್‍ ಅವರ ಗಾಯನ ಕಾರ್ಯಕ್ರಮವಿದೆ.
ಸಂಜೆ ಗಂಟೆ 7.30 ರಿಂದ ವಿದ್ವಾನ್‍ ರಾಮಕೃಷ್ಣನ್ ಮೂರ್ತಿ ಮತ್ತು ಬಳಗದವರಿಂದ ಸಂಗೀತ ಗಾಯನವಿದೆ.

ಪ್ರಶಸ್ತಿ ಪ್ರದಾನ ಸಮಾರಂಭ:

 

ಇದೇ 12 ರಂದು ಶನಿವಾರ ಸಂಜೆಗಂಟೆ 6 ರಿಂದ ವಸಂತ ಮಹಲ್‍ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡುವರು.

ಪ್ರಶಸ್ತಿ ಪುರಸ್ಕೃತರು:

ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ: ಪದ್ಮಶ್ರೀ ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ (ಒಂದು ಲಕ್ಷರೂ. ನಗದು ಪುರಸ್ಕಾರ. ಪ್ರಾಯೋಜಕರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು)

ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕರಾಷ್ಟ್ರೀಯ ಪ್ರಶಸ್ತಿ:

ಸಂಗೀತ ಕಲಾ ಆಚಾರ್ಯ, ಸಂಗೀತ ಕಲಾ ರತ್ನ ನೀಲಾ ರಾಂಗೋಪಾಲ್ (ಪುರಸ್ಕಾರ: ಒದು ಲಕ್ಷರೂ. ನಗದು ಪ್ರಾಯೋಜಕರು : ಎ.ಎಚ್. ರಾಮರಾವ್, ಅಧ್ಯಕ್ಷರು, ನ್ಯಾಷನಲ್‍ ಎಜ್ಯುಕೇಶನ್ ಸೊಸೈಟಿ ಮತ್ತು ಸುಧಾರಾಮರಾವ್, ಬೆಂಗಳೂರು)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

21 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago