Advertisement
ಸಾಂಸ್ಕೃತಿಕ

ಅ.12 ರಿಂದ ಧರ್ಮಸ್ಥಳದಲ್ಲಿ “ವೀಣೆಯ ಬೆಡಗು” : ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ

Share

ಧರ್ಮಸ್ಥಳ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಅ.12 ಮತ್ತು 13 (ಶನಿವಾರ ಮತ್ತು ಭಾನುವಾರ) “ವೀಣೆಯ ಬೆಡಗು” – ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅ. 12 ರಂದು ಶನಿವಾರ ಸಂಜೆ ಗಂಟೆ 4 ರಿಂದ ಪ್ರೊ. ಅರವಿಂದ ಹೆಬ್ಬಾರ್ ಮತ್ತು ಬಳಗದವರಿಂದ ವೃಂದಗಾಯನ ನಡೆಯಲಿದೆ. ವಿದ್ವಾನ್ ಕೃಷ್ಣ ಪವನ್‍ ಕುಮಾರ್ ಮೃದಂಗ ವಾದಕರಾಗಿ ಸಹಕರಿಸುವರು.

ಸಂಜೆ ಗಂಟೆ 5 ರಿಂದ ಡಾ. ಸಹನಾ, ಎಸ್.ವಿ. (ವೀಣೆ), ವಿದ್ವಾನ್ ಬಿ.ಎಸ್. ಪ್ರಶಾಂತ್ (ಮೃದಂಗ) ಮತ್ತು ವಿದ್ವಾನ್‍ ಟಿ.ಎನ್. ರಮೇಶ್ (ಘಟಂ) ಕಾರ್ಯಕ್ರಮ ನೀಡುವರು.
ಸಂಜೆ ಗಂಟೆ 7 ರಿಂದ  ಎ. ಕನ್ಯಾಕುಮಾರಿ (ಪಿಟೀಲು) ವಿದ್ವಾನ್ ಬಿ. ವಿಠಲ ರಂಗನ್ (ಸಹವಾದನ) ವಿದ್ವಾನ್‍ ಜಯಚಂದ್ರರಾವ್ (ಮೃದಂಗ), ವಿದ್ವಾನ್‍ ಎನ್. ಅಮೃತ್ (ಖಂಜರಿ) ಮತ್ತು ವಿದ್ವಾನ್ ಬಿ. ರಾಜಶೇಖರ್ (ಮೋರ್ಚಿಂಗ್) ಕಾರ್ಯಕ್ರಮ ನಡೆಸಿಕೊಡುವರು.

ಅ.13 ರಂದು ಭಾನುವಾರ ಸಂಜೆ ಗಂಟೆ 3.30 ರಿಂದ ವಿದ್ವಾನ್ ಬಾಲಸುಬ್ರಹ್ಮಣ್ಯ ಮತ್ತು ಬಳಗದವರಿಂದ ವೃಂದಗಾಯನ ನಡೆಯಲಿದೆ. ವಿದುಷಿ ಸಿ.ಎಸ್. ಉಷಾ (ಪಿಟೀಲು) ಮತ್ತು ವಿದ್ವಾನ್ ಬಿ.ಎಸ್. ಆನಂದ್ (ಮೃದಂಗ) ಸಹಕರಿಸುವರು.
ಸಂಜೆ ಗಂಟೆ 4.30 ರಿಂದ ಡಾ.ಗೀತಾ ಭಟ್‍ ಅವರಿಂದ ವೀಣಾವಾದನ ಕಾರ್ಯಕ್ರಮ ನಡೆಯಲಿದೆ.
ಸಂಜೆ 5.30 ರಿಂದ ನೀಲಾ ರಾಂಗೋಪಾಲ್‍ ಅವರ ಗಾಯನ ಕಾರ್ಯಕ್ರಮವಿದೆ.
ಸಂಜೆ ಗಂಟೆ 7.30 ರಿಂದ ವಿದ್ವಾನ್‍ ರಾಮಕೃಷ್ಣನ್ ಮೂರ್ತಿ ಮತ್ತು ಬಳಗದವರಿಂದ ಸಂಗೀತ ಗಾಯನವಿದೆ.

ಪ್ರಶಸ್ತಿ ಪ್ರದಾನ ಸಮಾರಂಭ:

 

ಇದೇ 12 ರಂದು ಶನಿವಾರ ಸಂಜೆಗಂಟೆ 6 ರಿಂದ ವಸಂತ ಮಹಲ್‍ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡುವರು.

ಪ್ರಶಸ್ತಿ ಪುರಸ್ಕೃತರು:

ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ: ಪದ್ಮಶ್ರೀ ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ (ಒಂದು ಲಕ್ಷರೂ. ನಗದು ಪುರಸ್ಕಾರ. ಪ್ರಾಯೋಜಕರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು)

ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕರಾಷ್ಟ್ರೀಯ ಪ್ರಶಸ್ತಿ:

ಸಂಗೀತ ಕಲಾ ಆಚಾರ್ಯ, ಸಂಗೀತ ಕಲಾ ರತ್ನ ನೀಲಾ ರಾಂಗೋಪಾಲ್ (ಪುರಸ್ಕಾರ: ಒದು ಲಕ್ಷರೂ. ನಗದು ಪ್ರಾಯೋಜಕರು : ಎ.ಎಚ್. ರಾಮರಾವ್, ಅಧ್ಯಕ್ಷರು, ನ್ಯಾಷನಲ್‍ ಎಜ್ಯುಕೇಶನ್ ಸೊಸೈಟಿ ಮತ್ತು ಸುಧಾರಾಮರಾವ್, ಬೆಂಗಳೂರು)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

4 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

7 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

8 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

16 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

17 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

18 hours ago