ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.
ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…