ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.
ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…