ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…