ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…