ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಣಗೊಂಡ ನೂತನ ಬ್ರಹ್ಮರಥವು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಥದ ಸ್ವಾಗತ ಹಾಗೂ ಇತರ ಚರ್ಚಿಸಲು ಪೂರ್ವಬಾವಿ ಸಭೆ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಈಗಾಗಲೇ ಸಿದ್ಧಗೊಂಡಿದೆ. ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದೆ. ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ತಲುಪಲಿದೆ. ಈ ಸಂದರ್ಭ ಅದ್ದೂರಿಯಾಗಿ ರಥವನ್ನು ಸ್ವಾಗತಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿವಿಧ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹೇಶ್ ಕುಮಾರ್ ಕರಿಕಳ, ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ರಥದ ದಾನಿ ಅಜಿತ್ ಶೆಟ್ಟಿ ಕಡಬ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ವಾಸ್ತುಶಿಲ್ಪಿ ಪ್ರಸಾದ ಮುನಿಯಂಗಳ ಮೊದಲಾದವರು ಉಪಸ್ಥಿತರಿದ್ದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…