ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಣಗೊಂಡ ನೂತನ ಬ್ರಹ್ಮರಥವು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಥದ ಸ್ವಾಗತ ಹಾಗೂ ಇತರ ಚರ್ಚಿಸಲು ಪೂರ್ವಬಾವಿ ಸಭೆ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಈಗಾಗಲೇ ಸಿದ್ಧಗೊಂಡಿದೆ. ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದೆ. ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ತಲುಪಲಿದೆ. ಈ ಸಂದರ್ಭ ಅದ್ದೂರಿಯಾಗಿ ರಥವನ್ನು ಸ್ವಾಗತಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿವಿಧ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹೇಶ್ ಕುಮಾರ್ ಕರಿಕಳ, ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ರಥದ ದಾನಿ ಅಜಿತ್ ಶೆಟ್ಟಿ ಕಡಬ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ವಾಸ್ತುಶಿಲ್ಪಿ ಪ್ರಸಾದ ಮುನಿಯಂಗಳ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…