ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…