ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…