ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…