Advertisement
ಕಾರ್ಯಕ್ರಮಗಳು

ಅ.31ರಂದು ಸಹಕಾರ ಸಂಘಗಳ ನಿರ್ದೇಶಕರಿಗೆ ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Share

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳಿ ಬೆಂಗಳೂರು ಹಾಗು ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಹಾಗು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಅ.31ರಂದು ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ, ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕರಾದ ಪಿ.ಕೆ.ಜಯಕೃಷ್ಣೇ ಗೌಡ, ಚಿತ್ತರಂಜನ್ ಬೋಳಾರ್, ಅಕಾಡಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ, ಇ-ಸ್ಟಾಂಪಿಂಗ್, ಸಹಕಾರ ಸಂಘದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗು ಸಹಕಾರ ಸಂಘಗಳ ಚುನಾವಣಾ ನಿಯಮ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಸಿ.ನಾರಾಣ ಗೌಡ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ವೆಂಕಟರಮಣ ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 minutes ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

28 minutes ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

5 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

5 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

5 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

21 hours ago