Advertisement
ಸುದ್ದಿಗಳು

ಅ.6 : ಸುಳ್ಯದಲ್ಲಿ ಸೀತಾರಾಮ ಕಲ್ಯಾಣೋತ್ಸವ

Share

ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಅ.6 ರಂದು ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಜರಗಲಿರುವುದು  ಎಂದು ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೀತಾರಾಮ ಕಲ್ಯಾಣೋತ್ಸವವು ಶ್ರೀ ಶಂಕರ ಭಕ್ತಿ ಚಾನೆಲ್ ನ ಭಜನಾ ಸಾಮ್ರಾಟ್ ನಿರ್ಣಾಯಕರಾದ ಹ.ರಾ.ನಾಗರಾಜಾಚಾರ್ಯ ಬೆಂಗಳೂರು ಇವರ ಉಪಸ್ಥಿತಿಯಲ್ಲಿ ನಡೆಯಲಿರುವುದು. ಕಾರ್ಯಕ್ರಮವು ಸಂಜೆ 5 ಗಂಟೆಗೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಮತ್ತು ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆಯ ಮೂಲಕ ಆರಂಭವಾಗಲಿದೆ. ನಂತರ ಗಂಟೆ 5.30 ರಿಂದ 6.30 ರ ತನಕ ಸಭಾ ಕಾರ್ಯಕ್ರಮ ನಡೆಯಲಿದ್ದು ಹ.ರಾ.ನಾಗರಾಜಾಚಾರ್ಯ ದ್ವೀಪ ಪ್ರಜ್ವಲನೆ ಮಾಡುವರು. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆ ಯವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅತಿಥಿಗಳಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ಉಪಸ್ಥಿತರಿರುತ್ತಾರೆ.
ನಿರಂತರ ನಾಲ್ಕು ಗಂಟೆಗಳ ಕಾಲ ಸೀತಾರಾಮ ಕಲ್ಯಾಣೋತ್ಸವದ ಪೂಜಾ ಕೈಂಕರ್ಯವು ನಡೆಯಲಿರುವುದು. ಈ ಸಂದರ್ಭದಲ್ಲಿ ಭಜನಾ ಸೇವೆಯು ನಡೆಯಲಿರುವುದು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲಕೃಷ್ಣ ಭಟ್, ಭಜನಾ ಮಂಡಳಿಯ ಪದಾಧಿಕಾರಿಗಳಾದ ಹೇಮಲತಾ ದೇಂಗೋಡಿ, ಕುಸುಮಾ ಮೋಂಟಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

10 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago