Advertisement
ಸುದ್ದಿಗಳು

ಅ.6 : ಸುಳ್ಯದಲ್ಲಿ ಸೀತಾರಾಮ ಕಲ್ಯಾಣೋತ್ಸವ

Share

ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಅ.6 ರಂದು ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಜರಗಲಿರುವುದು  ಎಂದು ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೀತಾರಾಮ ಕಲ್ಯಾಣೋತ್ಸವವು ಶ್ರೀ ಶಂಕರ ಭಕ್ತಿ ಚಾನೆಲ್ ನ ಭಜನಾ ಸಾಮ್ರಾಟ್ ನಿರ್ಣಾಯಕರಾದ ಹ.ರಾ.ನಾಗರಾಜಾಚಾರ್ಯ ಬೆಂಗಳೂರು ಇವರ ಉಪಸ್ಥಿತಿಯಲ್ಲಿ ನಡೆಯಲಿರುವುದು. ಕಾರ್ಯಕ್ರಮವು ಸಂಜೆ 5 ಗಂಟೆಗೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಮತ್ತು ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆಯ ಮೂಲಕ ಆರಂಭವಾಗಲಿದೆ. ನಂತರ ಗಂಟೆ 5.30 ರಿಂದ 6.30 ರ ತನಕ ಸಭಾ ಕಾರ್ಯಕ್ರಮ ನಡೆಯಲಿದ್ದು ಹ.ರಾ.ನಾಗರಾಜಾಚಾರ್ಯ ದ್ವೀಪ ಪ್ರಜ್ವಲನೆ ಮಾಡುವರು. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆ ಯವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅತಿಥಿಗಳಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ಉಪಸ್ಥಿತರಿರುತ್ತಾರೆ.
ನಿರಂತರ ನಾಲ್ಕು ಗಂಟೆಗಳ ಕಾಲ ಸೀತಾರಾಮ ಕಲ್ಯಾಣೋತ್ಸವದ ಪೂಜಾ ಕೈಂಕರ್ಯವು ನಡೆಯಲಿರುವುದು. ಈ ಸಂದರ್ಭದಲ್ಲಿ ಭಜನಾ ಸೇವೆಯು ನಡೆಯಲಿರುವುದು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲಕೃಷ್ಣ ಭಟ್, ಭಜನಾ ಮಂಡಳಿಯ ಪದಾಧಿಕಾರಿಗಳಾದ ಹೇಮಲತಾ ದೇಂಗೋಡಿ, ಕುಸುಮಾ ಮೋಂಟಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

4 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

22 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago