Advertisement
ಸುದ್ದಿಗಳು

ಅ:2 ರಿಂದ ಮುಳಿಯದಲ್ಲಿ “ಚಿನ್ನೋತ್ಸವದ ಸಂಭ್ರಮ”

Share

ಪುತ್ತೂರು: ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಶೋರೂಂನಲ್ಲಿ ಅಕ್ಟೋಬರ್ 2 ರಿಂದ 8ರವರೆಗೆ ಚಿನ್ನೋತ್ಸವದ ಸಂಭ್ರಮ.

Advertisement

ಈ ದಸರಾ ಸಂದರ್ಭದಲ್ಲಿ ಅಷ್ಟ ಲಕ್ಷ್ಮೀಯರ ಆಶೀರ್ವಾದ ಚಿನ್ನಕೊಳ್ಳುವವರ ಮೇಲೆ ಇರಲಿದೆ ಎಂಬ ನಂಬಿಕೆ ಜನರಲ್ಲಿದೆ.ಪ್ರದರ್ಶನ ಮತ್ತು ಮಾರಾಟದ ಈ ಉತ್ಸವದಲ್ಲಿ “ಸೆಲೆಬರೇಟ್ ದ ಗೋಲ್ಡ್” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶಾಲಶ್ರೇಣಿಯ, ವಿನೂತನ ಬಗೆಯ ವಿವಿಧ ಆಭರಣಗಳ ಸಂಗ್ರಹ ಈ ಮುಳಿಯ ಚಿನ್ನೋತ್ಸವದ ವಿಶೇಷ ಎಂದು ಕೃಷ್ಣನಾರಾಯಣ ಮುಳಿಯರವರು ತಿಳಿಸಿದರು.

1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಈಗ 2019ರಲ್ಲಿ ಬೆಲೆ ರೂ.3485/- ಇದೆ.  ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.5/- ಇತ್ತು. ಹೀಗಾಗಿ ವರ್ಷದೊಳಗೆ ಮುಳಿಯ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. “ಚಿನ್ನ ಎಂದೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯರವರು ವಿವರಿಸಿದರು.

ಚಿನ್ನೋತ್ಸವದ ಸಂದರ್ಭದಲ್ಲಿ ಅಲಂಕಾರ ಮೆಹೆಂದಿ ಪ್ರತೀ ದಿನ ಚಿನ್ನದ ನಾಣ್ಯ ಗೆಲ್ಲುವ, ವಾಕ್ ಇನ್ ಆದವರಿಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ. ಮುಂತಾದ ವಿಶೇಷ ಕಾರ್ಯಕ್ರಮದ “ಸಂಭ್ರಮದ ಸೆಲೆಬರೇಶನ್ ಇರಲಿದೆ ಎಂದು ಶಾಖಾ ಪ್ರಬಂಧಕ ನಾಮ್‍ದೇವ್ ಮಲ್ಯ ತಿಳಿಸಿದ್ದಾರೆ.

ಚಿನ್ನೋತ್ಸವ ಸಂದರ್ಭದಲ್ಲಿ ಅಂತರ ರಾಷ್ಟ್ರೀಯ ಖ್ಯಾತಿಯ ಮೈಕ್ರೊ ಮೆಹೆಂದಿ ಡಿಸೈನರ್  ಅನು ಉಪಾಧ್ಯ ಅ.2ರಂದು ಪುತ್ತೂರಿನಲ್ಲಿ ಹಾಗೂ 3ರಂದು ಬೆಳ್ತಂಗಡಿಯಲ್ಲಿ ಮುಳಿಯ ಶೋರೂಂನಲ್ಲಿ ನಿಮಗಾಗಿ ಲಭ್ಯರಿರುವರು.

ಹಾಗೆಯೇ ಕೆನರಾ ಬ್ಯಾಂಕ್‍ನ ಜನರಲ್ ಮ್ಯಾನೇಜರಾದ ಯೋಗೀಶ್ ಆಚಾರ್ಯ ಇವರು ಚಿನ್ನೋತ್ಸವಕ್ಕೆ ಚಾಲನೆ ನೀಡಲಿದ್ದು, ಗಿರಿಗಿಟ್ ಸಿನಿಮಾ ಖ್ಯಾತಿಯ ನಾಯಕ ನಟಿಯೂ ಪುತ್ತೂರಿನವರೇ ಆದ ಕು. ಶಿಲ್ಪಾ ಶೆಟ್ಟಿ ಇವರನ್ನೂ ಸನ್ಮಾನಿಸಲಾಗುವುದು. ಕು. ಶಿಲ್ಪಾ ಶೆಟ್ಟಿ ಇವರು ಅಪ್ಸರಾ ಕಲೆಕ್ಷನ್ ಎಂಬ ಹೊಸ ರೋಸ್ ಗೋಲ್ಡ್ ಡಿಸೈನ್ ಗಳನ್ನು ಅನಾವರಣಗೊಳಿಸುವರು.

“ಈ ರೋಸ್ ಗೋಲ್ಡ್ ಡಿಸೈನ್‍ಗಳು, ಡ್ಯಾನ್ಸಿಂಗ್ ಸ್ಟೋನ್ ಆಭರಣಗಳು” ಇದೇ ಪ್ರಥಮ ಬಾರಿಗೆ ಇದು ಪುತ್ತೂರಿಗೆ ಮುಳಿಯ ಪರಿಚಯಿಸುತ್ತದೆ. 18 ಕ್ಯಾರೆಟ್ ನಲ್ಲಿ ಮಾಡಿರುವುದರಿಂದ ಪಾಕೆಟ್ ಪ್ರೆಂಡ್ಲೀ ಕೂಡಾ ಎಂದು ಬಣ್ಣಿಸಿದರು. ಶೋರೂಂಗೆ ಬಂದು ಇವುಗಳನ್ನು ನೋಡಿ ಮುಳಿಯ ಚಿನ್ನಾಭರಣಗಳೊಂದಿಗೆ ಸಂಭ್ರಮಿಸಿ ಎಂದು ಕೇಶವ ಪ್ರಸಾದ್ ಮುಳಿಯ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

3 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago