Advertisement
ಸುದ್ದಿಗಳು

ಅ:2 ರಿಂದ ಮುಳಿಯದಲ್ಲಿ “ಚಿನ್ನೋತ್ಸವದ ಸಂಭ್ರಮ”

Share

ಪುತ್ತೂರು: ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಶೋರೂಂನಲ್ಲಿ ಅಕ್ಟೋಬರ್ 2 ರಿಂದ 8ರವರೆಗೆ ಚಿನ್ನೋತ್ಸವದ ಸಂಭ್ರಮ.

ಈ ದಸರಾ ಸಂದರ್ಭದಲ್ಲಿ ಅಷ್ಟ ಲಕ್ಷ್ಮೀಯರ ಆಶೀರ್ವಾದ ಚಿನ್ನಕೊಳ್ಳುವವರ ಮೇಲೆ ಇರಲಿದೆ ಎಂಬ ನಂಬಿಕೆ ಜನರಲ್ಲಿದೆ.ಪ್ರದರ್ಶನ ಮತ್ತು ಮಾರಾಟದ ಈ ಉತ್ಸವದಲ್ಲಿ “ಸೆಲೆಬರೇಟ್ ದ ಗೋಲ್ಡ್” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶಾಲಶ್ರೇಣಿಯ, ವಿನೂತನ ಬಗೆಯ ವಿವಿಧ ಆಭರಣಗಳ ಸಂಗ್ರಹ ಈ ಮುಳಿಯ ಚಿನ್ನೋತ್ಸವದ ವಿಶೇಷ ಎಂದು ಕೃಷ್ಣನಾರಾಯಣ ಮುಳಿಯರವರು ತಿಳಿಸಿದರು.

1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಈಗ 2019ರಲ್ಲಿ ಬೆಲೆ ರೂ.3485/- ಇದೆ.  ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.5/- ಇತ್ತು. ಹೀಗಾಗಿ ವರ್ಷದೊಳಗೆ ಮುಳಿಯ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. “ಚಿನ್ನ ಎಂದೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯರವರು ವಿವರಿಸಿದರು.

ಚಿನ್ನೋತ್ಸವದ ಸಂದರ್ಭದಲ್ಲಿ ಅಲಂಕಾರ ಮೆಹೆಂದಿ ಪ್ರತೀ ದಿನ ಚಿನ್ನದ ನಾಣ್ಯ ಗೆಲ್ಲುವ, ವಾಕ್ ಇನ್ ಆದವರಿಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ. ಮುಂತಾದ ವಿಶೇಷ ಕಾರ್ಯಕ್ರಮದ “ಸಂಭ್ರಮದ ಸೆಲೆಬರೇಶನ್ ಇರಲಿದೆ ಎಂದು ಶಾಖಾ ಪ್ರಬಂಧಕ ನಾಮ್‍ದೇವ್ ಮಲ್ಯ ತಿಳಿಸಿದ್ದಾರೆ.

ಚಿನ್ನೋತ್ಸವ ಸಂದರ್ಭದಲ್ಲಿ ಅಂತರ ರಾಷ್ಟ್ರೀಯ ಖ್ಯಾತಿಯ ಮೈಕ್ರೊ ಮೆಹೆಂದಿ ಡಿಸೈನರ್  ಅನು ಉಪಾಧ್ಯ ಅ.2ರಂದು ಪುತ್ತೂರಿನಲ್ಲಿ ಹಾಗೂ 3ರಂದು ಬೆಳ್ತಂಗಡಿಯಲ್ಲಿ ಮುಳಿಯ ಶೋರೂಂನಲ್ಲಿ ನಿಮಗಾಗಿ ಲಭ್ಯರಿರುವರು.

ಹಾಗೆಯೇ ಕೆನರಾ ಬ್ಯಾಂಕ್‍ನ ಜನರಲ್ ಮ್ಯಾನೇಜರಾದ ಯೋಗೀಶ್ ಆಚಾರ್ಯ ಇವರು ಚಿನ್ನೋತ್ಸವಕ್ಕೆ ಚಾಲನೆ ನೀಡಲಿದ್ದು, ಗಿರಿಗಿಟ್ ಸಿನಿಮಾ ಖ್ಯಾತಿಯ ನಾಯಕ ನಟಿಯೂ ಪುತ್ತೂರಿನವರೇ ಆದ ಕು. ಶಿಲ್ಪಾ ಶೆಟ್ಟಿ ಇವರನ್ನೂ ಸನ್ಮಾನಿಸಲಾಗುವುದು. ಕು. ಶಿಲ್ಪಾ ಶೆಟ್ಟಿ ಇವರು ಅಪ್ಸರಾ ಕಲೆಕ್ಷನ್ ಎಂಬ ಹೊಸ ರೋಸ್ ಗೋಲ್ಡ್ ಡಿಸೈನ್ ಗಳನ್ನು ಅನಾವರಣಗೊಳಿಸುವರು.

“ಈ ರೋಸ್ ಗೋಲ್ಡ್ ಡಿಸೈನ್‍ಗಳು, ಡ್ಯಾನ್ಸಿಂಗ್ ಸ್ಟೋನ್ ಆಭರಣಗಳು” ಇದೇ ಪ್ರಥಮ ಬಾರಿಗೆ ಇದು ಪುತ್ತೂರಿಗೆ ಮುಳಿಯ ಪರಿಚಯಿಸುತ್ತದೆ. 18 ಕ್ಯಾರೆಟ್ ನಲ್ಲಿ ಮಾಡಿರುವುದರಿಂದ ಪಾಕೆಟ್ ಪ್ರೆಂಡ್ಲೀ ಕೂಡಾ ಎಂದು ಬಣ್ಣಿಸಿದರು. ಶೋರೂಂಗೆ ಬಂದು ಇವುಗಳನ್ನು ನೋಡಿ ಮುಳಿಯ ಚಿನ್ನಾಭರಣಗಳೊಂದಿಗೆ ಸಂಭ್ರಮಿಸಿ ಎಂದು ಕೇಶವ ಪ್ರಸಾದ್ ಮುಳಿಯ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

6 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

7 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago