ಆಂಗ್ಲ ಮಾಧ್ಯಮ ಶಾಲೆ ಆದೇಶ ಹಿಂಪಡೆಯಲು ಸಾಹಿತಿಗಳ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ಹಿರಿಯ ಸಾಹಿತಿ ಹಾಗು ಚಿಂತಕ ಚಿದಾನಂದ ಮೂರ್ತಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

Advertisement
Advertisement

ಈ ಸಂದರ್ಭದಲ್ಲಿ ಸಾಹಿತಿ ದೊಡ್ಡರಂಗೇಗೌಡರು ಹಿಂದಿನ ಸರಕಾರ ಜಾರಿ‌ ಮಾಡಿದ ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾದ್ಯಮ ಶಿಕ್ಷಣ ವ್ಯವಸ್ಥೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಇಂಗ್ಲೀಷ್ ಮಾಧ್ಯಮದಿಂದ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಹಾಗಾಗಿ ಕೂಡಲೇ ಹಿಂದಿನ ಸರಕಾರದ ನಿರ್ಧಾರವನ್ನು ಹಿಂದಕ್ಕೆ ಪಡೆದು ಕನ್ನಡ ಉಳಿಸಬೇಕು ಅಂತ ಒತ್ತಾಯ ಮಾಡಿದರು. ನಾವು ಯಾರು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ ಆದರೆ ಒಂದು ಶಿಕ್ಷಣ ಮಾದ್ಯಮವಾಗಿ ಕಲಿಯಲು ನಮ್ಮ ವಿರೋಧವಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಹಾಗೂ ಚಿಂತಕರಾದ ಚಿದಾನಂದ ಮೂರ್ತಿ ಅವರು ಮಾತನಾಡಿ. ಸಂಖ್ಯೆ ದೃಷ್ಟಿಯಲ್ಲಿ ಖಾಸಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಗಿಂತ ಸರಕಾರಿ  ಶಾಲೆಗಳಿಗೆ ಹೋಗುವವರ ವಿದ್ಯಾರ್ಥಿಗಳ ಸಂಖ್ಯೆ ತುಂಬ ಕಡಿಮೆ ಇದೆ ಹಾಗಾಗಿ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ಮಾಡುವತ್ತ ಸರಕಾರ ಗಮನ ಹರಿಸಬೇಕು ಅಂತ‌ ಮುಖ್ಯಮಂತ್ರಿ ಗಳಿಗೆ ಮನವಿ ಮಾಡಿದರು.

ಸಾಹಿತಿ ಗೋ ರು ಚನ್ನಬಸಪ್ಪ ಅವರು ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ರೀತಿಯ ಪ್ರಯೋಗಗಳನ್ನು ಮಾಡದೆ ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಯಾವುದೇ ರೀತಿಯ ಭಾಷೆ ಬದಲಾವಣೆ ಆಗದಂತೆ ಹೊಸ ಕಾನೂನು ರಚನೆ ಮಾಡಬೇಕು ಎಂದು ತಿಳಿಸಿದರು.

Advertisement

ಸಾಹಿತಿಗಳ ಅಭಿಪ್ರಾಯಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಶೀಘ್ರವೇ ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಚಿದಾನಂದ ಮೂರ್ತಿ ದೊಡ್ಡ ರಂಗೇಗೌಡ ಗೋರು ಚನ್ನಬಸಪ್ಪ ಎಂಎಲ್ ಸಿ ಅಶ್ವಥನಾರಾಯಣ್ ಸೇರಿದಂತೆ ಹಲವು ಕನ್ನಡ ಹೋರಾಟಗಾರರು ಹಾಗು ಸಾಹಿತಿಗಳು ಸಭೆಯಲ್ಲಿ ಭಾಗವಹಿಸಿದ್ದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

5 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

6 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

13 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

22 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

22 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

23 hours ago