Advertisement

ಆಂಗ್ಲ ಮಾಧ್ಯಮ ಶಾಲೆ ಆದೇಶ ಹಿಂಪಡೆಯಲು ಸಾಹಿತಿಗಳ ಮನವಿ

Share

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ಹಿರಿಯ ಸಾಹಿತಿ ಹಾಗು ಚಿಂತಕ ಚಿದಾನಂದ ಮೂರ್ತಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಾಹಿತಿ ದೊಡ್ಡರಂಗೇಗೌಡರು ಹಿಂದಿನ ಸರಕಾರ ಜಾರಿ‌ ಮಾಡಿದ ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾದ್ಯಮ ಶಿಕ್ಷಣ ವ್ಯವಸ್ಥೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಇಂಗ್ಲೀಷ್ ಮಾಧ್ಯಮದಿಂದ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಹಾಗಾಗಿ ಕೂಡಲೇ ಹಿಂದಿನ ಸರಕಾರದ ನಿರ್ಧಾರವನ್ನು ಹಿಂದಕ್ಕೆ ಪಡೆದು ಕನ್ನಡ ಉಳಿಸಬೇಕು ಅಂತ ಒತ್ತಾಯ ಮಾಡಿದರು. ನಾವು ಯಾರು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ ಆದರೆ ಒಂದು ಶಿಕ್ಷಣ ಮಾದ್ಯಮವಾಗಿ ಕಲಿಯಲು ನಮ್ಮ ವಿರೋಧವಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಹಾಗೂ ಚಿಂತಕರಾದ ಚಿದಾನಂದ ಮೂರ್ತಿ ಅವರು ಮಾತನಾಡಿ. ಸಂಖ್ಯೆ ದೃಷ್ಟಿಯಲ್ಲಿ ಖಾಸಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಗಿಂತ ಸರಕಾರಿ  ಶಾಲೆಗಳಿಗೆ ಹೋಗುವವರ ವಿದ್ಯಾರ್ಥಿಗಳ ಸಂಖ್ಯೆ ತುಂಬ ಕಡಿಮೆ ಇದೆ ಹಾಗಾಗಿ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ಮಾಡುವತ್ತ ಸರಕಾರ ಗಮನ ಹರಿಸಬೇಕು ಅಂತ‌ ಮುಖ್ಯಮಂತ್ರಿ ಗಳಿಗೆ ಮನವಿ ಮಾಡಿದರು.

ಸಾಹಿತಿ ಗೋ ರು ಚನ್ನಬಸಪ್ಪ ಅವರು ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ರೀತಿಯ ಪ್ರಯೋಗಗಳನ್ನು ಮಾಡದೆ ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಯಾವುದೇ ರೀತಿಯ ಭಾಷೆ ಬದಲಾವಣೆ ಆಗದಂತೆ ಹೊಸ ಕಾನೂನು ರಚನೆ ಮಾಡಬೇಕು ಎಂದು ತಿಳಿಸಿದರು.

ಸಾಹಿತಿಗಳ ಅಭಿಪ್ರಾಯಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಶೀಘ್ರವೇ ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಚಿದಾನಂದ ಮೂರ್ತಿ ದೊಡ್ಡ ರಂಗೇಗೌಡ ಗೋರು ಚನ್ನಬಸಪ್ಪ ಎಂಎಲ್ ಸಿ ಅಶ್ವಥನಾರಾಯಣ್ ಸೇರಿದಂತೆ ಹಲವು ಕನ್ನಡ ಹೋರಾಟಗಾರರು ಹಾಗು ಸಾಹಿತಿಗಳು ಸಭೆಯಲ್ಲಿ ಭಾಗವಹಿಸಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

8 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

18 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

19 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

19 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago