MIRROR FOCUS

ಆಂದೋಲನ ರೂಪ ಪಡೆದ “ಅಡಿಕೆ ಮರ ಏರುವ ತರಬೇತಿ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ: ಅಡಿಕೆ ಮರ ಏರುವ ತರಬೇತಿ ಶಿಬಿರ ಈಗ ಆಂದೋಲನದ ರೂಪ ಪಡೆಯುತ್ತಿದೆ. ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.

Advertisement
Advertisement

ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು.

ಇದೀಗ ಆ ಯೋಚನೆ ಕಾರ್ಯರೂಪಕ್ಕೆ ಬಂದಿದೆ. ಈಗಾಗಲೇ ಪೆರ್ಲದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ಸಹಕಾರಿ ಸಂಘದ ಮೂಲಕ  ನಡೆದಿದೆ. ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ.

ಶಿಬಿರದ ಬಗ್ಗೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಹೀಗೆ ಹೇಳುತ್ತಾರೆ,

Advertisement

 

ಶಿಬಿರದ ಬಗ್ಗೆ ಮುಖ್ಯ ತರಬೇತುದಾರ ಅಣ್ಣು ನಾಯ್ಕ್ ಹೀಗೆ ಹೇಳುತ್ತಾರೆ,

ಪಂಜದಲ್ಲಿ ಈಗ ನಡೆಯುತ್ತಿರುವ ಶಿಬಿರವನ್ನು 3 ಸಹಕಾರಿ ಸಂಘಗಳು ಜೊತೆಯಾಗಿ ಸೇರಿ ಮಾಡುತ್ತಿದೆ.  ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಜೇಸಿಐ ಪಂಜ ಪಂಚಶ್ರೀ ಮತ್ತು ಲಯನ್ಸ್ ಪಂಜ  ಸಹಕಾರದೊಂದಿಗೆ ಶಿಬಿರ ನಡೆಯುತ್ತಿದೆ.

Advertisement

(ಪಂಜದಲ್ಲಿ ನಡೆಯುತ್ತಿರುವ ಶಿಬಿರ)

ಶಿಬಿರದ ಬಗ್ಗೆ ಕೃಷಿಕ ಸುರೇಶ್ಚಂದ್ರ ಕಲ್ಮಡ್ಕ ಹೀಗೆ ಅಭಿಪ್ರಾಯಪಡುತ್ತಾರೆ,

 

Advertisement

ಸಹಕಾರಿ ಸಂಘಗಳು ಈಗ ಅಡಿಕೆ ಮರ ಏರುವ ಶಿಬಿರವನ್ನು ಆಂದೋಲನ ರೂಪದಲ್ಲಿ ಮಾಡಿ ಕೃಷಿಕರ ರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ. ಜಿಲ್ಲೆಯ ವಿವಿಧ ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಹೀಗಾಗಿ ಅಡಿಕೆಗೆ ಭವಿಷ್ಯವನ್ನು ಸಹಕಾರಿ ಸಂಘಗಳೇ ರೂಪಿಸುತ್ತಿವೆ.

 

 

ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿ ಅಭಿಪ್ರಾಯ ಹೀಗಿದೆ,

Advertisement

 

ಪಂಜದ ಶಿಬಿರದ ತರಬೇತುದಾರರು ಇವರು,

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

View Comments

  • We welcome this great step of yours. Appreciate this efforts. We wish all the success. This opens doors for lot of youngsters who have no idea and now they have lot of work to do. Thanks!!!

  • ಧಾರಾಳ ವಿಡಿಯೋ ಕ್ಲಿಪ್ ಸೇರಿಸಿ ಮನಮುಟ್ಟುವ ವರದಿ ಮಾಡಿದ್ದೀರಿ ಮಹೇಶ್. ಅಭಿನಂದನೆಗಳು.

Published by
ಮಹೇಶ್ ಪುಚ್ಚಪ್ಪಾಡಿ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

6 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

24 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago