ಆಕಸ್ಮಿಕ ಬೆಂಕಿ : ಕರಕಲಾದ ವಾಹನ

November 7, 2019
9:58 PM

ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು.

Advertisement

ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವಿರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror