ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು.
ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವಿರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…