ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು.
ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವಿರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…