ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

July 24, 2020
11:04 AM

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

Advertisement
Advertisement
ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
 # ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
May 26, 2025
11:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group