Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

Advertisement
ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

1 hour ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

2 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

15 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

21 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago