ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

Advertisement
Advertisement
ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

5 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

5 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

6 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

6 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

7 hours ago