Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

7 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

15 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

15 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

15 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

24 hours ago