Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

57 minutes ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 hour ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 hour ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 hour ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 hour ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

9 hours ago