Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

4 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

4 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

10 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

11 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

11 hours ago