Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

6 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

12 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

12 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

23 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago