Advertisement
ಅನುಕ್ರಮ

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

Share

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ ತಿಳಿಯದು.

ಬಾಲ್ಯದಲ್ಲಿ ಅಪ್ಪ ತೆಂಗಿನ ಗಿಡಗಳಿಗೆ ಪೈಪ್ ನಲ್ಲಿ ರಾತ್ರಿಯ ಹೊತ್ತು ನೀರು ಹಿಡಿಯುತ್ತಿದ್ದಾಗ ಅವರೊಂದಿಗೆ ನಾನು ,ತಂಗಿ ಇಬ್ಬರೂ ಹೋಗುತ್ತಿದ್ದೆವು. ಮಿನುಗುವ ನಕ್ಷತ್ರ, ಹೊಳೆಯುವ ಗ್ರಹಗಳು, ಚಲಿಸುವ ಉಪಗ್ರಹಗಳತ್ತ ಎಂದಿಗೂ ಕುಂದದ ಆಕರ್ಷಣೆ. ಆಕಾಶದಲ್ಲಿ ದಿನನಿತ್ಯ ಅಚ್ಚರಿಯ ಘಟನೆಗಳು ವೈಚಿತ್ರ್ಯ ಗಳು ‌ನಡೆಯುತ್ತಿರುತ್ತವೆ. ಅನಂತವಾಗಿರುವ  ಆಗಸ ದಿನದಿನವೂ  ಹೊಸಪ್ರಪಂಚವನ್ನು , ಕಲ್ಪನೆಯನ್ನು ತೆರೆದಿಡುತ್ತದೆ.  ನೋಡ ನೋಡುವಂತೆಯೇ ಬೀಳವ ಉಲ್ಕೆಗಳು  ನಮ್ಮ ಕನಸಿನ ಹಾದಿಗೆ ಆಶೀರ್ವಾದವೆಂದೇ ಅನಿಸುತ್ತದೆ.
ಅಗಣಿತ ನಕ್ಷತ್ರಗಳ ಲೋಕವೆಂದರೆ‌ ಊಹೆಗೆ  ನಿಲುಕದ  ವಿಸ್ಮಯ ಲೋಕ.
ಮನೆಯಲ್ಲಿ ಸಂಜೆ ಏಳು ಕಾಲು  ಗಂಟೆಯಾಗುತ್ತಿದ್ದಂತೆ  ನಮ್ಮೆಜಮಾನ್ರು ಹೊರಗೆ ಒಳಗೆ ಸುತ್ತಲಾರಂಭಿಸಿದರು. ಟೆರೇಸ್ ಮೇಲೆ  ಹೋಗಿ ಆಕಾಶದತ್ತ ಮುಖ ಮಾಡಿ ಏನೋ ಹುಡುಕುತ್ತಿದ್ದರು.  ಸುಮಾರು ಹೊತ್ತು ನೋಡಿದಾಗ ಅವರು ಕಂಡು ಹಿಡಿದೇ ಬಿಟ್ಟರು. ಅದುವೇ   ನಿಯೋವೈಸ್ ಧೂಮಕೇತು .  ಈ ಶತಮಾನದ ಅಪರೂಪದ ಧೂಮಕೇತು  ದೊಡ್ಡದಾದ ಆಕಾಶಕಾಯ. ನಮ್ಮ ಜೀವಿತಾವಧಿಯಲ್ಲಿ ಸಿಕ್ಕ ದೊಡ್ಡ ಅವಕಾಶ.  ಈಗ ನಾವು  ಆಕಾಶದಲ್ಲಿ ಕಾಣಬಹುದು.  ಬರಿಗಣ್ಣಿಗೇ ಗೋಚರಿಸುತ್ತಿದೆ.  ಸಪ್ತ ಋಷಿ ಮಂಡಲದ ಕೆಳಗೆ ವಾಯವ್ಯ ದಿಕ್ಕಿನಲ್ಲಿ  ನಿಯೋ ವೈಸ್ ಧೂಮಕೇತು ಕಾಣಿಸುತ್ತಿದೆ. ಮೋಡಗಳಿಲ್ಲದ ಶುಭ್ರ ಆಕಾಶದಲ್ಲಿ ಧೂಮಕೇತು  ಸಂಜೆ 7.30 ರ ಸುಮಾರಿಗೆ ಕಾಣಸಿಗುತ್ತದೆ. ಒಂದು ಗಂಟೆಗಳ ಕಾಲ  ನೋಡಲು ಸಾಧ್ಯ.  ಆಗಸ್ಟ್ 15 ರವರೆಗೂ ಈ ದೃಶ್ಯ ಲಭ್ಯ ವಿರಬಹುದೆಂಬ ಅಂದಾಜು.  ಈ ಧೂಮಕೇತು ವನ್ನು ಇನ್ನೊಮ್ಮೆ ನೋಡಬೇಕೆಂದರೆ 6800 ವರ್ಷಗಳು ಬೇಕಾಗುತ್ತದೆ. ಹಾಗಾಗಿ ಮೋಡವಿಲ್ಲದ ಆಕಾಶ ಲಭ್ಯವಾದರೆ  ಧೂಮಕೇತು ವನ್ನು  ತಪ್ಪದೆ ವೀಕ್ಷಿಸಿ ಆನಂದಿಸಿ
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 minute ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 hour ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

3 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago