Advertisement
MIRROR FOCUS

ಆಚರಣೆಯ ಮೆರುಗು ಹೆಚ್ಚಿಸುವ ನವರಾತ್ರಿ ವೇಷಗಳು

Share

ಸುಳ್ಯ: ನವರಾತ್ರಿ ಎಂದೊಡನೆ ಮನಸಿಗೆ ಓಡೋಡಿ ಬರುವುದು ಶುದ್ಧ ಶಾಸ್ತ್ರೀಯ ಸಂಗೀತದ ಇಂಪು, ಚೆಂಡೆ, ವಾದ್ಯಗಳ ಅಬ್ಬರ, ನವರಾತ್ರಿ ವೇಷಗಳ ವರ್ಣ ವೈವಿಧ್ಯ. ನವರಾತ್ರಿ ಸಂಗೀತೋತ್ಸವಗಳ ಮೂಲಕ ಶಾಸ್ತ್ರೀಯ ಸಂಗೀತದ ಇಂಪು ಮನಸನ್ನು ಪುಳಕಿತಗೊಳಿಸಿದರೆ, ಚೆಂಡೆ ವಾದ್ಯಗಳ ಅಬ್ಬರದೊಂದಿಗೆ ಆರ್ಭಟಿಸುವ ರಾಕ್ಷಸ ವೇಷಗಳು, ವೈವಿಧ್ಯ ಕುಣಿತಗಳೊಂದಿಗೆ ತಂಡೋಪ ತಂಡವಾಗಿ ತಿರುಗಾಟ ನಡೆಸುವ ಹುಲಿ, ಸಿಂಹ, ಕರಡಿಯ ನವರಾತ್ರಿ ವೇಷಗಳು ದಸರಾ ಆಚರಣೆಯ ಮೆರುಗನ್ನು ಹೆಚ್ಚಸುತ್ತದೆ.

ನವರಾತ್ರಿ ಆರಂಭದಿಂದಲೂ ನಗರ, ಗ್ರಾಮದ ಬೀದಿಗಳಲ್ಲಿ ವೈವಿಧ್ಯಮಯ ಹುಲಿ, ಸಿಂಹ, ಕರಡಿ ವೇಷಗಳ ಕುಣಿತಗಳು ಜನಾಕರ್ಷಣೆಯನ್ನು ಪಡೆಯುತ್ತವೆ. ಜೊತೆಗೆ ಬೇಟೆಗಾರನ ವೇಷ, ಹಾಸ್ಯಗಾರನ ವೇಷಗಳು ಸಂಭ್ರಮವನ್ನು ಇಮ್ಮಡಿಗೊಳಿಸುತ್ತದೆ. ಒಂದೆರಡು ರಾಕ್ಷಸ, ಹುಲಿ, ಕರಡಿ, ಸಿಂಹ ವೇಷಗಳು, ಚೆಂಡೆ ವಾದನಕಾರರು ಸೇರಿದ ಚಿಕ್ಕ ಚಿಕ್ಕ ತಂಡಗಳು ಒಂದೆಡೆಯಾದರೆ, 10- 15 ಹುಲಿ, ಸಿಂಹ, ಕರಡಿ ವೇಷಗಳನ್ನೊಳಗೊಂಡ ದೊಡ್ಡ ತಂಡಗಳೂ ಕಂಡು ಬರುತ್ತಾರೆ. ಪಾರಂಪರಿಕ ನವರಾತ್ರಿ ವೇಷಗಳು ತುಳುನಾಡಿನ ದಸರಾ ಆಚರಣೆಯ ಅವಿಭಾಜ್ಯ ಅಂಗ.

 

ಗ್ರಾಮ, ನಗರ ಬೀದಿಗಳಲ್ಲಿ, ಮನೆ ಮನೆಗಳಲ್ಲಿ ಹುಲಿ, ಕರಡಿ, ಸಿಂಹಗಳ ವೈವಿಧ್ಯ ವೇಷಗಳ ಮೈ ನವಿರೇಳಿಸುವ ಕುಣಿತಗಳು, ರಾಕ್ಷಸ ವೇಷದ ಅಬ್ಬರ ದಸರಾ ಆಚರಣೆಯ ವೈಭವವನ್ನು ಹೆಚ್ಚಿಸುತ್ತದೆ. ಒಂಭತ್ತು ದಿನಗಳ ಕಾಲ ವೇಷ ಧರಿಸಿ ನಾಡಿನಾದ್ಯಂತ ಸಂಚರಿಸಿ ಹಬ್ಬವನ್ನು ಸಂಪನ್ನಗೊಳಿಸುವ ನವರಾತ್ರಿ ವೇಷಗಳು ವಿಜಯದಶಮಿ ದಿನದಂದು ತಿರುಗಾಟವನ್ನು ಕೊನೆಗೊಳಿಸುತ್ತಾರೆ. ಶಾರದೋತ್ಸವ, ದಸರಾ ಮೆರವಣಿಗೆಗಳಲ್ಲಿಯೂ ಭಾಗವಹಿಸಿದ ಬಳಿಕ ವೇಷವನ್ನು ತೆಗೆಯುವರು. ಹರಕೆ ಹೇಳಿ ನವರಾತ್ರಿ ವೇಷ ಹಾಕುವವರೂ ಇದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಪಾರಂಪರಿಕ ನವರಾತ್ರಿ ವೇಷಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ ವೇಷ ಭೂಷಣಗಳಲ್ಲಿಯೂ ಬದಲಾವಣೆ ಕಾಣುತ್ತಿದೆ ಎನ್ನುತ್ತಾರೆ ಹಿರಿಯರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

12 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

19 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

20 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago