ಆಚರಣೆ ಮನೆಗೆ ಮಾತ್ರ ಸೀಮಿತವಲ್ಲ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

October 30, 2019
10:17 PM

ಪುತ್ತೂರು: ಹಬ್ಬಗಳು ಕೇವಲ ಮನೆಯ ಆಚರಣೆಗೆ ಸೀಮಿತವಾಗಬಾರದು, ಬದಲಾಗಿ ಎಲ್ಲ ಸಂಸ್ಥೆಗಳಲ್ಲಿ ಆಚರಿಸುವಂತಾಗಬೇಕು. ದೀಪಾವಳಿ ಎಂಬುದು ದೀಪಗಳ ಹಬ್ಬವಾಗಿದೆ. ಅದರಂತೆಯೆ ಇದು ಮನುಷ್ಯನ ಮನಸ್ಸು, ಹೃದಯವನ್ನು ಶುದ್ಧವಾಗಿಸಿ ಕ್ರೂರ ಗುಣವನ್ನು ತೊಡೆದುಹಾಕುವುದರ ಸಂಕೇತ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಆಯೋಜಿಸಿದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು. ಹಬ್ಬ ಎಂದರೆ ಎಲ್ಲರೂ ಸೇರಿ ಆಚರಿಸುವುದು ಮಾತ್ರವಲ್ಲ, ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡು ಮುಂದಿನ ಜೀವನ ನಡೆಸಲು ದಾರಿಯಾಗಬೇಕು. ಅಂತೆಯೇ ಆಚರಣೆಯ ಮುಖ್ಯ ಉದ್ದೇಶವೇ ಸಂಬಂಧದ ಗಟ್ಟಿಗೊಳಿಸುವಿಕೆ ಆಗಿದೆ ಎಂದು ಹೇಳಿದರು.

ಸ್ನಾತಕೋತ್ತರ ಅಧ್ಯಯನ ಹಾಗೂ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಮಾತನಾಡಿ, ದೀಪಾವಳಿಯಲ್ಲಿ ಬೆಳಕಿಗೆ ಹೆಚ್ಚಿನ ಸ್ಥಾನವಿದೆ. ಸಾಲು ಸಾಲು ದೀಪಗಳನ್ನು ಹಚ್ಚಿ ಬದುಕಿನ ಅಂಧಕಾರವನ್ನು ಹೋಗಲಾಡಿಸಬೇಕು. ಮಣ್ಣಿನಿಂದ ಮಾಡಿದ ಹಣತೆಯು ಒಂದು ಸಂದೇಶವನ್ನು ನೀಡುತ್ತದೆ ಅದೇನೆಂದರೆ, ಮಣ್ಣಿನಿಂದ ಬಂದವನು ಮಣ್ಣಿಗೇ ಸೇರಬೇಕು. ದೀಪಾವಳಿ ಎಂದರೆ ಸಂಭ್ರಮದ ಜೊತೆಗೆ ಒಗ್ಗೂಡುವಿಕೆಯ ಹಬ್ಬ ಎಂದು ಹೇಳಿದರು.

ದೀಪಾವಳಿಯು ಜೀವನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ನೀಡುವ ಹಬ್ಬವಾಗಬೇಕು, ಹಾಗೆಯೇ ಎಲ್ಲರೂ ಒಗಟ್ಟಾಗಿ ಬದುಕುವಂತಾಗಬೇಕು. ಎಲ್ಲರೂ ದೀಪವನ್ನು ಹಚ್ಚಿ ಹೊಸ ಜೀವನವನ್ನು ಪ್ರಾರಂಭಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಗಳಾದ ಅನುಶಾ ಸಿ.ಎಚ್. ಪ್ರಾರ್ಥಿಸಿದರು. ಅಶಿತಾ ಸ್ವಾಗತಿಸಿದರು. ಅಕ್ಷಿತ್ ವಂದಿಸಿದರು. ಪ್ರಿಯ ಪಿ.ಜಿ. ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ
ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror