Advertisement
ಸುದ್ದಿಗಳು

ಆಚರಣೆ ಮನೆಗೆ ಮಾತ್ರ ಸೀಮಿತವಲ್ಲ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

Share

ಪುತ್ತೂರು: ಹಬ್ಬಗಳು ಕೇವಲ ಮನೆಯ ಆಚರಣೆಗೆ ಸೀಮಿತವಾಗಬಾರದು, ಬದಲಾಗಿ ಎಲ್ಲ ಸಂಸ್ಥೆಗಳಲ್ಲಿ ಆಚರಿಸುವಂತಾಗಬೇಕು. ದೀಪಾವಳಿ ಎಂಬುದು ದೀಪಗಳ ಹಬ್ಬವಾಗಿದೆ. ಅದರಂತೆಯೆ ಇದು ಮನುಷ್ಯನ ಮನಸ್ಸು, ಹೃದಯವನ್ನು ಶುದ್ಧವಾಗಿಸಿ ಕ್ರೂರ ಗುಣವನ್ನು ತೊಡೆದುಹಾಕುವುದರ ಸಂಕೇತ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಆಯೋಜಿಸಿದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು. ಹಬ್ಬ ಎಂದರೆ ಎಲ್ಲರೂ ಸೇರಿ ಆಚರಿಸುವುದು ಮಾತ್ರವಲ್ಲ, ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡು ಮುಂದಿನ ಜೀವನ ನಡೆಸಲು ದಾರಿಯಾಗಬೇಕು. ಅಂತೆಯೇ ಆಚರಣೆಯ ಮುಖ್ಯ ಉದ್ದೇಶವೇ ಸಂಬಂಧದ ಗಟ್ಟಿಗೊಳಿಸುವಿಕೆ ಆಗಿದೆ ಎಂದು ಹೇಳಿದರು.

ಸ್ನಾತಕೋತ್ತರ ಅಧ್ಯಯನ ಹಾಗೂ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಮಾತನಾಡಿ, ದೀಪಾವಳಿಯಲ್ಲಿ ಬೆಳಕಿಗೆ ಹೆಚ್ಚಿನ ಸ್ಥಾನವಿದೆ. ಸಾಲು ಸಾಲು ದೀಪಗಳನ್ನು ಹಚ್ಚಿ ಬದುಕಿನ ಅಂಧಕಾರವನ್ನು ಹೋಗಲಾಡಿಸಬೇಕು. ಮಣ್ಣಿನಿಂದ ಮಾಡಿದ ಹಣತೆಯು ಒಂದು ಸಂದೇಶವನ್ನು ನೀಡುತ್ತದೆ ಅದೇನೆಂದರೆ, ಮಣ್ಣಿನಿಂದ ಬಂದವನು ಮಣ್ಣಿಗೇ ಸೇರಬೇಕು. ದೀಪಾವಳಿ ಎಂದರೆ ಸಂಭ್ರಮದ ಜೊತೆಗೆ ಒಗ್ಗೂಡುವಿಕೆಯ ಹಬ್ಬ ಎಂದು ಹೇಳಿದರು.

ದೀಪಾವಳಿಯು ಜೀವನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ನೀಡುವ ಹಬ್ಬವಾಗಬೇಕು, ಹಾಗೆಯೇ ಎಲ್ಲರೂ ಒಗಟ್ಟಾಗಿ ಬದುಕುವಂತಾಗಬೇಕು. ಎಲ್ಲರೂ ದೀಪವನ್ನು ಹಚ್ಚಿ ಹೊಸ ಜೀವನವನ್ನು ಪ್ರಾರಂಭಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಗಳಾದ ಅನುಶಾ ಸಿ.ಎಚ್. ಪ್ರಾರ್ಥಿಸಿದರು. ಅಶಿತಾ ಸ್ವಾಗತಿಸಿದರು. ಅಕ್ಷಿತ್ ವಂದಿಸಿದರು. ಪ್ರಿಯ ಪಿ.ಜಿ. ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

8 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago