ಪುತ್ತೂರು: ಹಬ್ಬಗಳು ಕೇವಲ ಮನೆಯ ಆಚರಣೆಗೆ ಸೀಮಿತವಾಗಬಾರದು, ಬದಲಾಗಿ ಎಲ್ಲ ಸಂಸ್ಥೆಗಳಲ್ಲಿ ಆಚರಿಸುವಂತಾಗಬೇಕು. ದೀಪಾವಳಿ ಎಂಬುದು ದೀಪಗಳ ಹಬ್ಬವಾಗಿದೆ. ಅದರಂತೆಯೆ ಇದು ಮನುಷ್ಯನ ಮನಸ್ಸು, ಹೃದಯವನ್ನು ಶುದ್ಧವಾಗಿಸಿ ಕ್ರೂರ ಗುಣವನ್ನು ತೊಡೆದುಹಾಕುವುದರ ಸಂಕೇತ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಆಯೋಜಿಸಿದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು. ಹಬ್ಬ ಎಂದರೆ ಎಲ್ಲರೂ ಸೇರಿ ಆಚರಿಸುವುದು ಮಾತ್ರವಲ್ಲ, ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡು ಮುಂದಿನ ಜೀವನ ನಡೆಸಲು ದಾರಿಯಾಗಬೇಕು. ಅಂತೆಯೇ ಆಚರಣೆಯ ಮುಖ್ಯ ಉದ್ದೇಶವೇ ಸಂಬಂಧದ ಗಟ್ಟಿಗೊಳಿಸುವಿಕೆ ಆಗಿದೆ ಎಂದು ಹೇಳಿದರು.
ಸ್ನಾತಕೋತ್ತರ ಅಧ್ಯಯನ ಹಾಗೂ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಮಾತನಾಡಿ, ದೀಪಾವಳಿಯಲ್ಲಿ ಬೆಳಕಿಗೆ ಹೆಚ್ಚಿನ ಸ್ಥಾನವಿದೆ. ಸಾಲು ಸಾಲು ದೀಪಗಳನ್ನು ಹಚ್ಚಿ ಬದುಕಿನ ಅಂಧಕಾರವನ್ನು ಹೋಗಲಾಡಿಸಬೇಕು. ಮಣ್ಣಿನಿಂದ ಮಾಡಿದ ಹಣತೆಯು ಒಂದು ಸಂದೇಶವನ್ನು ನೀಡುತ್ತದೆ ಅದೇನೆಂದರೆ, ಮಣ್ಣಿನಿಂದ ಬಂದವನು ಮಣ್ಣಿಗೇ ಸೇರಬೇಕು. ದೀಪಾವಳಿ ಎಂದರೆ ಸಂಭ್ರಮದ ಜೊತೆಗೆ ಒಗ್ಗೂಡುವಿಕೆಯ ಹಬ್ಬ ಎಂದು ಹೇಳಿದರು.
ದೀಪಾವಳಿಯು ಜೀವನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ನೀಡುವ ಹಬ್ಬವಾಗಬೇಕು, ಹಾಗೆಯೇ ಎಲ್ಲರೂ ಒಗಟ್ಟಾಗಿ ಬದುಕುವಂತಾಗಬೇಕು. ಎಲ್ಲರೂ ದೀಪವನ್ನು ಹಚ್ಚಿ ಹೊಸ ಜೀವನವನ್ನು ಪ್ರಾರಂಭಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಗಳಾದ ಅನುಶಾ ಸಿ.ಎಚ್. ಪ್ರಾರ್ಥಿಸಿದರು. ಅಶಿತಾ ಸ್ವಾಗತಿಸಿದರು. ಅಕ್ಷಿತ್ ವಂದಿಸಿದರು. ಪ್ರಿಯ ಪಿ.ಜಿ. ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…