ಸುದ್ದಿಗಳು

ಆಟಿ ಅಮವಾಸ್ಯೆಗೆ ಬರಬೇಕಿತ್ತು ಮಳೆ…!

Share
ಡಾ.ಚಂದ್ರಶೇಖರ ದಾಮ್ಲೆ

 

Advertisement

 ಬರಹ : ಡಾ.ಚಂದ್ರಶೇಖರ ದಾಮ್ಲೆ , ಸುಳ್ಯ

 

 

Advertisement

 

Advertisement

ತುಳುನಾಡಿನ ಜಾನಪದ ಬದುಕಿನಲ್ಲಿ ಆಟಿ ತಿಂಗಳೆಂದರೆ ಅತಿ ಮಳೆಯಿಂದಾಗಿ ಬಡತನದ ತಿಂಗಳು. ಕೃಷಿಕರ ಪಾಲಿಗೆ ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ಕಷ್ಟದ ದಿನಗಳ ಕಾಲ. ತುಳು ಸಂಪ್ರದಾಯದಲ್ಲಿ ಮದುವೆಯಾದ ವರ್ಷ ಮಗಳು ತವರಿಗೆ ಬಂದು ಒಂದು ತಿಂಗಳು ಸುಖವಾಗಿ ಕಳೆಯುವ ಸಂಪ್ರದಾಯ ಇದ್ದ ತಿಂಗಳು. ಅನೇಕ ರೋಗಗಳು ಹರಡುವ ಭಯ ಹುಟ್ಟಿಸುತ್ತಿದ್ದ ಆಟಿ ತಿಂಗಳು ದುಸ್ವಪ್ನದಂತೆ ಕಳೆದು ಹೋಗಬೇಕಾಗಿತ್ತು.

ಈ ಆಟಿ ತಿಂಗಳಲ್ಲಿ ಅಮಾವಾಸ್ಯೆಯ ದಿನ ಬಹಳ ಮುಖ್ಯವಾದದ್ದು. ಏಕೆಂದರೆ ಆ ದಿನ ಹಾಲೆ ಮರದಲ್ಲಿ ಪ್ರಕೃತಿಯ ಎಲ್ಲ ಔಷಧಗಳು ಬಂದು ಸೇರುತ್ತವೆ ಎಂಬ ನಂಬಿಕೆ ಇದೆ. ಅದರ ಪ್ರಕಾರ ಆ ದಿನ ಬೆಳಗ್ಗೆ ಸೂರ್ಯೋದಯಕ್ಕೆ ಮೊದಲು ಹಾಲೆ ಮರದ ಬಳಿಗೆ ಹೋಗಿ ಕಲ್ಲಿನಲ್ಲಿ ಜಜ್ಜಿ ಅದರ ಕೆತ್ತೆಯನ್ನು ತಂದು ಗುದ್ದಿ ರಸತೆಗೆದು ಬರೆ ಹೊಟ್ಟೆಗೆ ಕುಡಿದರೆ ಅದು ಸರ್ವರೋಗ ನಿರೋಧಕ ಎಂಬ ನಂಬಿಕೆ ಇದೆ. ಈ ರೀತಿ ತಮ್ಮ ಆರೋಗ್ಯದ ಬಗ್ಗೆ ರೋಗನಿರೋಧಕ ಪ್ರಯೋಗ ನಡೆಯುತ್ತಿತ್ತು. ಈಗ ಇದು ಮರೆತು ಹೋಗಿರುವ ಸಂಗತಿಯಾಗಿದೆ. ಆಧುನಿಕ ಮಾತ್ರೆ ಸೀರಪ್ ಇಂಜೆಕ್ಷನ್ ಗಳ ಎದುರು ಮೂಢನಂಬಿಕೆ ಎನಿಸಿದೆ. ಆದರೆ ನನಗಿನ್ನೂ ವಿಶ್ವಾಸವಿದೆ. ನಾನು ಪ್ರತಿ ವರ್ಷ ಆಟಿ ಅಮಾವಾಸ್ಯೆಯಂದು ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲೆ ಮರದ ರಸ ಕುಡಿಯುವ ವಾಡಿಕೆ ಇಟ್ಟುಕೊಂಡಿದ್ದೇನೆ.

ಪಂಚಾಂಗ ಪ್ರಕಾರ ಇಂದು (1-8-2019) ಆಟಿ ಅಮಾವಾಸ್ಯೆ. ಭಾರೀ ಮಳೆ ಇರಬೇಕಿತ್ತು. ಆದರೆ ಎರಡು ದಿನಗಳಿಂದ ಮಳೆ ಇಲ್ಲ. ಸೂರ್ಯೋದಯಕ್ಕೆ ಮೊದಲೇ ಹಾಲೆ ಮರದ ಕೆತ್ತೆ ತರಲು ಹೋದರೆ ಮರದ ತೊಗಟೆ ಮಳೆ ಇದ್ದರೆ ಇರುವಂತೆ ಮೃದುವಾಗಿಲ್ಲ. ಗಟ್ಟಿಯಾಗಿತ್ತು. ಮರದ ಮೈ ಇಡೀ ಇರುವೆಗಳ ಓಡಾಟ. ಅತಿಯಾಗಿ ಸೊಳ್ಳೆಗಳ ಕಾಟ. ಪ್ರಕೃತಿ ನಿಯಮದಂತೆ ಬರಬೇಕಿದ್ದ ಮಳೆ ಬಾರದೆ ವಾತಾವರಣ ಕಲುಷಿತಗೊಂಡಿದೆ. ಹೀಗೇ ಆದರೆ ಡಿಸೆಂಬರ್ ನಿಂದಲೇ ಬರಗಾಲ ಬಾಧಿಸೀತು. ಹಾಗಾಗಿ ಇನ್ನೀಗ ಬಂದಷ್ಟು ಮಳೆ ನೀರನ್ನು ಇಂಗು ಗುಂಡಿಗಳನ್ನು ಮಾಡಿ ಇಂಗಿಸಿಕೊಳ್ಳುವುದು ಒಳ್ಳೆಯದು.

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

15 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

15 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

15 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

15 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

1 day ago