ಬರಹ : ಡಾ.ಚಂದ್ರಶೇಖರ ದಾಮ್ಲೆ , ಸುಳ್ಯ
ತುಳುನಾಡಿನ ಜಾನಪದ ಬದುಕಿನಲ್ಲಿ ಆಟಿ ತಿಂಗಳೆಂದರೆ ಅತಿ ಮಳೆಯಿಂದಾಗಿ ಬಡತನದ ತಿಂಗಳು. ಕೃಷಿಕರ ಪಾಲಿಗೆ ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ಕಷ್ಟದ ದಿನಗಳ ಕಾಲ. ತುಳು ಸಂಪ್ರದಾಯದಲ್ಲಿ ಮದುವೆಯಾದ ವರ್ಷ ಮಗಳು ತವರಿಗೆ ಬಂದು ಒಂದು ತಿಂಗಳು ಸುಖವಾಗಿ ಕಳೆಯುವ ಸಂಪ್ರದಾಯ ಇದ್ದ ತಿಂಗಳು. ಅನೇಕ ರೋಗಗಳು ಹರಡುವ ಭಯ ಹುಟ್ಟಿಸುತ್ತಿದ್ದ ಆಟಿ ತಿಂಗಳು ದುಸ್ವಪ್ನದಂತೆ ಕಳೆದು ಹೋಗಬೇಕಾಗಿತ್ತು.
ಈ ಆಟಿ ತಿಂಗಳಲ್ಲಿ ಅಮಾವಾಸ್ಯೆಯ ದಿನ ಬಹಳ ಮುಖ್ಯವಾದದ್ದು. ಏಕೆಂದರೆ ಆ ದಿನ ಹಾಲೆ ಮರದಲ್ಲಿ ಪ್ರಕೃತಿಯ ಎಲ್ಲ ಔಷಧಗಳು ಬಂದು ಸೇರುತ್ತವೆ ಎಂಬ ನಂಬಿಕೆ ಇದೆ. ಅದರ ಪ್ರಕಾರ ಆ ದಿನ ಬೆಳಗ್ಗೆ ಸೂರ್ಯೋದಯಕ್ಕೆ ಮೊದಲು ಹಾಲೆ ಮರದ ಬಳಿಗೆ ಹೋಗಿ ಕಲ್ಲಿನಲ್ಲಿ ಜಜ್ಜಿ ಅದರ ಕೆತ್ತೆಯನ್ನು ತಂದು ಗುದ್ದಿ ರಸತೆಗೆದು ಬರೆ ಹೊಟ್ಟೆಗೆ ಕುಡಿದರೆ ಅದು ಸರ್ವರೋಗ ನಿರೋಧಕ ಎಂಬ ನಂಬಿಕೆ ಇದೆ. ಈ ರೀತಿ ತಮ್ಮ ಆರೋಗ್ಯದ ಬಗ್ಗೆ ರೋಗನಿರೋಧಕ ಪ್ರಯೋಗ ನಡೆಯುತ್ತಿತ್ತು. ಈಗ ಇದು ಮರೆತು ಹೋಗಿರುವ ಸಂಗತಿಯಾಗಿದೆ. ಆಧುನಿಕ ಮಾತ್ರೆ ಸೀರಪ್ ಇಂಜೆಕ್ಷನ್ ಗಳ ಎದುರು ಮೂಢನಂಬಿಕೆ ಎನಿಸಿದೆ. ಆದರೆ ನನಗಿನ್ನೂ ವಿಶ್ವಾಸವಿದೆ. ನಾನು ಪ್ರತಿ ವರ್ಷ ಆಟಿ ಅಮಾವಾಸ್ಯೆಯಂದು ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲೆ ಮರದ ರಸ ಕುಡಿಯುವ ವಾಡಿಕೆ ಇಟ್ಟುಕೊಂಡಿದ್ದೇನೆ.
ಪಂಚಾಂಗ ಪ್ರಕಾರ ಇಂದು (1-8-2019) ಆಟಿ ಅಮಾವಾಸ್ಯೆ. ಭಾರೀ ಮಳೆ ಇರಬೇಕಿತ್ತು. ಆದರೆ ಎರಡು ದಿನಗಳಿಂದ ಮಳೆ ಇಲ್ಲ. ಸೂರ್ಯೋದಯಕ್ಕೆ ಮೊದಲೇ ಹಾಲೆ ಮರದ ಕೆತ್ತೆ ತರಲು ಹೋದರೆ ಮರದ ತೊಗಟೆ ಮಳೆ ಇದ್ದರೆ ಇರುವಂತೆ ಮೃದುವಾಗಿಲ್ಲ. ಗಟ್ಟಿಯಾಗಿತ್ತು. ಮರದ ಮೈ ಇಡೀ ಇರುವೆಗಳ ಓಡಾಟ. ಅತಿಯಾಗಿ ಸೊಳ್ಳೆಗಳ ಕಾಟ. ಪ್ರಕೃತಿ ನಿಯಮದಂತೆ ಬರಬೇಕಿದ್ದ ಮಳೆ ಬಾರದೆ ವಾತಾವರಣ ಕಲುಷಿತಗೊಂಡಿದೆ. ಹೀಗೇ ಆದರೆ ಡಿಸೆಂಬರ್ ನಿಂದಲೇ ಬರಗಾಲ ಬಾಧಿಸೀತು. ಹಾಗಾಗಿ ಇನ್ನೀಗ ಬಂದಷ್ಟು ಮಳೆ ನೀರನ್ನು ಇಂಗು ಗುಂಡಿಗಳನ್ನು ಮಾಡಿ ಇಂಗಿಸಿಕೊಳ್ಳುವುದು ಒಳ್ಳೆಯದು.
Advertisement
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…