Advertisement
ಸುದ್ದಿಗಳು

ಆಟಿ ಅಮವಾಸ್ಯೆಗೆ ಬರಬೇಕಿತ್ತು ಮಳೆ…!

Share
ಡಾ.ಚಂದ್ರಶೇಖರ ದಾಮ್ಲೆ

 

 ಬರಹ : ಡಾ.ಚಂದ್ರಶೇಖರ ದಾಮ್ಲೆ , ಸುಳ್ಯ

 

 

 

ತುಳುನಾಡಿನ ಜಾನಪದ ಬದುಕಿನಲ್ಲಿ ಆಟಿ ತಿಂಗಳೆಂದರೆ ಅತಿ ಮಳೆಯಿಂದಾಗಿ ಬಡತನದ ತಿಂಗಳು. ಕೃಷಿಕರ ಪಾಲಿಗೆ ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ಕಷ್ಟದ ದಿನಗಳ ಕಾಲ. ತುಳು ಸಂಪ್ರದಾಯದಲ್ಲಿ ಮದುವೆಯಾದ ವರ್ಷ ಮಗಳು ತವರಿಗೆ ಬಂದು ಒಂದು ತಿಂಗಳು ಸುಖವಾಗಿ ಕಳೆಯುವ ಸಂಪ್ರದಾಯ ಇದ್ದ ತಿಂಗಳು. ಅನೇಕ ರೋಗಗಳು ಹರಡುವ ಭಯ ಹುಟ್ಟಿಸುತ್ತಿದ್ದ ಆಟಿ ತಿಂಗಳು ದುಸ್ವಪ್ನದಂತೆ ಕಳೆದು ಹೋಗಬೇಕಾಗಿತ್ತು.

ಈ ಆಟಿ ತಿಂಗಳಲ್ಲಿ ಅಮಾವಾಸ್ಯೆಯ ದಿನ ಬಹಳ ಮುಖ್ಯವಾದದ್ದು. ಏಕೆಂದರೆ ಆ ದಿನ ಹಾಲೆ ಮರದಲ್ಲಿ ಪ್ರಕೃತಿಯ ಎಲ್ಲ ಔಷಧಗಳು ಬಂದು ಸೇರುತ್ತವೆ ಎಂಬ ನಂಬಿಕೆ ಇದೆ. ಅದರ ಪ್ರಕಾರ ಆ ದಿನ ಬೆಳಗ್ಗೆ ಸೂರ್ಯೋದಯಕ್ಕೆ ಮೊದಲು ಹಾಲೆ ಮರದ ಬಳಿಗೆ ಹೋಗಿ ಕಲ್ಲಿನಲ್ಲಿ ಜಜ್ಜಿ ಅದರ ಕೆತ್ತೆಯನ್ನು ತಂದು ಗುದ್ದಿ ರಸತೆಗೆದು ಬರೆ ಹೊಟ್ಟೆಗೆ ಕುಡಿದರೆ ಅದು ಸರ್ವರೋಗ ನಿರೋಧಕ ಎಂಬ ನಂಬಿಕೆ ಇದೆ. ಈ ರೀತಿ ತಮ್ಮ ಆರೋಗ್ಯದ ಬಗ್ಗೆ ರೋಗನಿರೋಧಕ ಪ್ರಯೋಗ ನಡೆಯುತ್ತಿತ್ತು. ಈಗ ಇದು ಮರೆತು ಹೋಗಿರುವ ಸಂಗತಿಯಾಗಿದೆ. ಆಧುನಿಕ ಮಾತ್ರೆ ಸೀರಪ್ ಇಂಜೆಕ್ಷನ್ ಗಳ ಎದುರು ಮೂಢನಂಬಿಕೆ ಎನಿಸಿದೆ. ಆದರೆ ನನಗಿನ್ನೂ ವಿಶ್ವಾಸವಿದೆ. ನಾನು ಪ್ರತಿ ವರ್ಷ ಆಟಿ ಅಮಾವಾಸ್ಯೆಯಂದು ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲೆ ಮರದ ರಸ ಕುಡಿಯುವ ವಾಡಿಕೆ ಇಟ್ಟುಕೊಂಡಿದ್ದೇನೆ.

ಪಂಚಾಂಗ ಪ್ರಕಾರ ಇಂದು (1-8-2019) ಆಟಿ ಅಮಾವಾಸ್ಯೆ. ಭಾರೀ ಮಳೆ ಇರಬೇಕಿತ್ತು. ಆದರೆ ಎರಡು ದಿನಗಳಿಂದ ಮಳೆ ಇಲ್ಲ. ಸೂರ್ಯೋದಯಕ್ಕೆ ಮೊದಲೇ ಹಾಲೆ ಮರದ ಕೆತ್ತೆ ತರಲು ಹೋದರೆ ಮರದ ತೊಗಟೆ ಮಳೆ ಇದ್ದರೆ ಇರುವಂತೆ ಮೃದುವಾಗಿಲ್ಲ. ಗಟ್ಟಿಯಾಗಿತ್ತು. ಮರದ ಮೈ ಇಡೀ ಇರುವೆಗಳ ಓಡಾಟ. ಅತಿಯಾಗಿ ಸೊಳ್ಳೆಗಳ ಕಾಟ. ಪ್ರಕೃತಿ ನಿಯಮದಂತೆ ಬರಬೇಕಿದ್ದ ಮಳೆ ಬಾರದೆ ವಾತಾವರಣ ಕಲುಷಿತಗೊಂಡಿದೆ. ಹೀಗೇ ಆದರೆ ಡಿಸೆಂಬರ್ ನಿಂದಲೇ ಬರಗಾಲ ಬಾಧಿಸೀತು. ಹಾಗಾಗಿ ಇನ್ನೀಗ ಬಂದಷ್ಟು ಮಳೆ ನೀರನ್ನು ಇಂಗು ಗುಂಡಿಗಳನ್ನು ಮಾಡಿ ಇಂಗಿಸಿಕೊಳ್ಳುವುದು ಒಳ್ಳೆಯದು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

14 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago