Advertisement
MIRROR FOCUS

ಆಟಿ ಅಮಾವಾಸ್ಯೆ | ಹಾಲೆ ಮರದ ಕಷಾಯ , ಮರ ಕೆಸುವಿನ ಪತ್ರೊಡೆ….!

Share

ಕರಾವಳಿಯಲ್ಲಿ ಆಷಾಢ ಅಮಾವಾಸ್ಯೆಯನ್ನು ಆಟಿ ಅಮಾವಾಸ್ಯೆ ಎನ್ನುತ್ತಾರೆ. ಸಾಮಾನ್ಯವಾಗಿ ಭೀಮನ ಅಮಾವಾಸ್ಯೆಯೇ ಆಟಿ ಅಮಾವಾಸ್ಯೆಯಾಗಿದೆ.

ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಅದರಲ್ಲೂ ತುಳುನಾಡಿನಲ್ಲಿ ಆಷಾಢ ಅಮಾಸ್ಯೆಯಂದು ಮುಂಜಾನೆ ಖಾಲಿ ಹೊಟ್ಟೆಗೆ ಹಾಲೆ ಮರದಿಂದ ತೆಗೆದ ಹಾಲಿಗೆ ಬೆಳ್ಳುಳ್ಳಿ, ಕರಿಮೆಣಸು ಮತ್ತು ಓಮದ ಕಾಳನ್ನು ಸೇರಿಸಿ ಮನೆಯ ಸದಸ್ಯರೆಲ್ಲರೂ ಕೂಡ ಸೇವಿಸುವ ಪದ್ಧತಿಯಿದೆ. ಸಂಕ್ರಾಂತಿಯಂದು ಬೇವು – ಬೆಲ್ಲ ಸೇವನೆಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಆಷಾಢ ಅಮಾವಾಸ್ಯೆಯಂದು ಸೇವಿಸುವ ಹಾಲೆ ಮರದ ಕಷಾಯಕ್ಕೂ ಇದೆ. ಈ ಕಷಾಯವನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ವೈಜ್ಞಾನಿಕವಾಗಿ ಈ ಮರದಿಂದ ತೆಗೆಯುವ ಹಾಲಿನಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವಿದೆ.

ಸೂರ್ಯೋದಯಕ್ಕೆ ಮೊದಲೇ ಪಾಲೆ ಮರ (ಹಾಲೆ ಮರ) ದ ಸನಿಹ ಹೋಗಿ ಬಿಳಿ ಕಲ್ಲಿನಿಂದ ಜಜ್ಜಿ ಆ ಮರದ ತೊಗಟೆಯನ್ನು ತೆಗೆದು ಬರಬೇಕು. ತೊಗಟೆಯನ್ನು ತೆಗೆಯುವಾಗ ಕಬ್ಬಿಣದ ಕತ್ತಿಯನ್ನು ತಾಗಿಸಬಾರದು. ಅಂದು ಮನೆಮಂದಿಯೆಲ್ಲರೂ ಆರೋಗ್ಯವರ್ಧಕವಾದ ಪಾಲೆಯ ಅತಿ ಕಹಿಯಾದ ರಸವನ್ನು ಕುಡಿಯುತ್ತಾರೆ. ನಂತರ ತೆಂಗಿನ ಕಾಯಿ ತುರಿ ಹಾಕಿದ ಗಂಜಿ ಉಣ್ಣುತ್ತಾರೆ.

ವೈಜ್ಞಾನಿಕವಾಗಿ ಈ ಆಚರಣೆಯನ್ನು ಗಮನಿಸಿದರೆ, ಪಾಲೆ ತೊಗಟೆಯ ರಸ ಒಂದು ವರ್ಷದ ಕಾಲ ಯಾವುದೇ ರೋಗ ರುಜಿನಗಳು ದೂರವಾಗುತ್ತದೆ ಎನ್ನುವಂತಹ ನಂಬಿಕೆ ಇದೆ. ಅನ್ಯ ಆಹಾರ ಸೇವನೆಗೆ ಮೂದಲು ಖಾಲಿ ಹೊಟ್ಟೆಗೆ ಸೇವಿಸುವುದು ಅತೀ ಉತ್ತಮವೆಂದು ತಿಳಿವಳಿಕೆ ಇದೆ.

ಹಿಂದಿನ ಕಾಲದಲ್ಲಿ ಆಟಿತಿಂಗಳಿನಲ್ಲಿ ವಿಪರೀತ ಮಳೆ.  ಮಳೆಯಿಂದಾಗಿ ಶರೀರದಲ್ಲಿ ಕಫ ವೃದ್ಧಿಯಾಗಿ ಅಗ್ನಿ ಕುಂಠಿತವಾಗಿರುತ್ತದೆ. ಅಪೌಷ್ಟಿಕತೆಯಿಂದ ರೋಗಗಳೂ ಹೆಚ್ಚು. ಆದ್ದರಿಂದ ಈ ಮಾಸದಲ್ಲಿ ಆಟಿ ಕಳಂಜ ದೈವವು ಅಮಾವಾಸ್ಯೆಯಂದು ಅನೇಕ ಬಗೆಯ ಔಷಧೀಯ ಗುಣಗಳನ್ನು ತಂದು ಮರದಲ್ಲಿರಿಸುತ್ತದೆ. ಯಾರು ತೊಗಟೆಯ ರಸವನ್ನು ನಂಬಿಕೆಯಿಂದ ಸೇವಿಸುತ್ತಾರೆಯೋ ಅವರು ವರ್ಷಪೂರ್ತಿ ಆರೋಗ್ಯವಾಗಿರುತ್ತಾರೆ ಎಂಬ ನಂಬಿಕೆಯೂ ಬಲವಾಗಿದೆ.

ಹಾಲೆಮರ ಹಾಲಿನಲ್ಲಿ ಸಸ್ಯ ಕ್ಷಾರದಂತಹ ಔಷಧೀಯ ಗುಣಗಳಿವೆ ಎಂದು ಕಂಡು ಬಂದಿದೆ.  ವೈದ್ಯಕೀಯದಲ್ಲಿ ಹೊಟ್ಟೆನೋವು, ಅತಿಸಾರ,ವಾತ, ಸುಂಧಿನೋವು, ಮಲೇರಿಯಾ, ಜ್ವರ, ಸ್ತ್ರೀರೋಗ, ಹುಣ್ಣುನಿವಾರಣೆಯಲ್ಲಿ ಬಳಕೆಯಾಗುವ ಔಷಧೀಯ ಗುಣಗಳು ಮರದ ಹಾಲು ಮತ್ತು ತೊಗಟೆಯಲ್ಲಿ ಕಂಡು ಬಂದಿವೆ.

ಹಾಲೆ ಮರವನ್ನು ಆಯುರ್ವೇದದಲ್ಲಿ ಸಪ್ತಪರ್ಣ ಎನ್ನುತ್ತಾರೆ. ಈ ಮರದ ಎಲೆಗಳಲ್ಲಿ ಏಳು ಎಲೆಗಳಿರುವ ಕಾರಣ ಸಪ್ತ ಪರ್ಣ ಎಂದು ಹೆಸರು ಬಂದಿರಬೇಕು. ಹೀಗಾಗಿ ಸಪ್ತಪರ್ಣಿ ಎಂದೂ ಕರೆಯುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

4 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

4 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

18 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

18 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

23 hours ago