ಸುಳ್ಯ:ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು ಎಂಬುದಕ್ಕೆ ಹಿಮಕರ ಎಂ ಅವರೇ ಜ್ವಲಂತ ಉದಾಹರಣೆ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು.
ಅವರು ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿಮಕರ ಎಂ. ರವರಿಗೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುರುಂಜಿಭಾಗ್, ಸುಳ್ಯ, ಇಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡುತ್ತಾ ಮಾತನಾಡುತ್ತಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 40 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ, ವಸತಿ ನಿಲಯದ ಮೇಲ್ವಿಚಾರಕರಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯೊಂದಿಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ದಾರಿಮಾಡಿಕೊಟ್ಟು ಓರ್ವ ದಕ್ಷ ಅಧಿಕಾರಿ ಎಂದು ಕರೆಸಿಕೊಂಡವರು. ಇಂತಹ ಅಧಿಕಾರಿ ವರ್ಗದವರಿದ್ದಲ್ಲಿ ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಎಂದರು.
ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ವಿಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೆವಿಜಿ ಪಾಲಿಟೆಕ್ನಿಕ್ನ ಚಂದ್ರಶೇಖರ ಬಿಳಿನೆಲೆ ಮಾತನಾಡಿ, ಹಿಮಕರ ಅವರು ಹಲವಾರು ಸವಾಲುಗಳನ್ನು ಸ್ವೀಕರಿಸಿ ಓರ್ವ ಉತ್ತಮ ಅಧಿಕಾರಿ ಎಂದು ಕರೆಸಿಕೊಂಡವರು ಎಂದು ಅವರ ಸೇವೆಯನ್ನು ಶ್ಲಾಘಿಸಿದರು.
ಅಭಿನಂದನೆ ಸ್ವೀಕರಿಸಿದ ಹಿಮಕರ ಎಂ ರವರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಳ್ಳುವುದರೊಂದಿಗೆ ತಮಗೆ ಸಹಕರಿಸಿದವರನ್ನು ನೆನಪಿಸಿಕೊಂಡವರು. ವಸತಿ ನಿಲಯದ ಸಿಬ್ಬಂದಿ ವರ್ಗದವರಾದ ಸುವಾಸಿನಿ, ಸತ್ಯವತಿ, ಹೇಮ, ಅಕ್ಷತ, ಗಾಯತ್ರಿ, ವಸತಿ ನಿಲಯದ ನಾಯಕಿ ಅಶ್ವಿನಿ ಎ ವಿ, ಉಪನಾಯಕಿ ಮೌನ ಹೆಚ್ ಜಿ ಮೊದಲಾದವರು ಉಪಸ್ಥಿತರಿದ್ದರು.
ರಶ್ಮಿತಾ ಮತ್ತು ತಂಡ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ಸ್ವಾಗತಿಸಿ, ಕೃತಿ ಕೆ ಹೆಚ್ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…