Advertisement
ಸುದ್ದಿಗಳು

ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು

Share

ಸುಳ್ಯ:ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು ಎಂಬುದಕ್ಕೆ ಹಿಮಕರ ಎಂ ಅವರೇ ಜ್ವಲಂತ ಉದಾಹರಣೆ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು.

ಅವರು ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿಮಕರ ಎಂ. ರವರಿಗೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುರುಂಜಿಭಾಗ್, ಸುಳ್ಯ, ಇಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡುತ್ತಾ ಮಾತನಾಡುತ್ತಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 40 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ, ವಸತಿ ನಿಲಯದ ಮೇಲ್ವಿಚಾರಕರಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯೊಂದಿಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ದಾರಿಮಾಡಿಕೊಟ್ಟು ಓರ್ವ ದಕ್ಷ ಅಧಿಕಾರಿ ಎಂದು ಕರೆಸಿಕೊಂಡವರು. ಇಂತಹ ಅಧಿಕಾರಿ ವರ್ಗದವರಿದ್ದಲ್ಲಿ ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಎಂದರು.

ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ವಿಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೆವಿಜಿ ಪಾಲಿಟೆಕ್ನಿಕ್‍ನ ಚಂದ್ರಶೇಖರ ಬಿಳಿನೆಲೆ ಮಾತನಾಡಿ, ಹಿಮಕರ ಅವರು ಹಲವಾರು ಸವಾಲುಗಳನ್ನು ಸ್ವೀಕರಿಸಿ ಓರ್ವ ಉತ್ತಮ ಅಧಿಕಾರಿ ಎಂದು ಕರೆಸಿಕೊಂಡವರು ಎಂದು ಅವರ ಸೇವೆಯನ್ನು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿದ ಹಿಮಕರ ಎಂ ರವರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಳ್ಳುವುದರೊಂದಿಗೆ ತಮಗೆ ಸಹಕರಿಸಿದವರನ್ನು ನೆನಪಿಸಿಕೊಂಡವರು. ವಸತಿ ನಿಲಯದ ಸಿಬ್ಬಂದಿ ವರ್ಗದವರಾದ ಸುವಾಸಿನಿ, ಸತ್ಯವತಿ, ಹೇಮ, ಅಕ್ಷತ, ಗಾಯತ್ರಿ, ವಸತಿ ನಿಲಯದ ನಾಯಕಿ ಅಶ್ವಿನಿ ಎ ವಿ, ಉಪನಾಯಕಿ ಮೌನ ಹೆಚ್ ಜಿ ಮೊದಲಾದವರು ಉಪಸ್ಥಿತರಿದ್ದರು.

ರಶ್ಮಿತಾ ಮತ್ತು ತಂಡ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ಸ್ವಾಗತಿಸಿ, ಕೃತಿ ಕೆ ಹೆಚ್ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago