ಸುಳ್ಯ:ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು ಎಂಬುದಕ್ಕೆ ಹಿಮಕರ ಎಂ ಅವರೇ ಜ್ವಲಂತ ಉದಾಹರಣೆ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು.
ಅವರು ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿಮಕರ ಎಂ. ರವರಿಗೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುರುಂಜಿಭಾಗ್, ಸುಳ್ಯ, ಇಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡುತ್ತಾ ಮಾತನಾಡುತ್ತಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 40 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ, ವಸತಿ ನಿಲಯದ ಮೇಲ್ವಿಚಾರಕರಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯೊಂದಿಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ದಾರಿಮಾಡಿಕೊಟ್ಟು ಓರ್ವ ದಕ್ಷ ಅಧಿಕಾರಿ ಎಂದು ಕರೆಸಿಕೊಂಡವರು. ಇಂತಹ ಅಧಿಕಾರಿ ವರ್ಗದವರಿದ್ದಲ್ಲಿ ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಎಂದರು.
ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ವಿಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೆವಿಜಿ ಪಾಲಿಟೆಕ್ನಿಕ್ನ ಚಂದ್ರಶೇಖರ ಬಿಳಿನೆಲೆ ಮಾತನಾಡಿ, ಹಿಮಕರ ಅವರು ಹಲವಾರು ಸವಾಲುಗಳನ್ನು ಸ್ವೀಕರಿಸಿ ಓರ್ವ ಉತ್ತಮ ಅಧಿಕಾರಿ ಎಂದು ಕರೆಸಿಕೊಂಡವರು ಎಂದು ಅವರ ಸೇವೆಯನ್ನು ಶ್ಲಾಘಿಸಿದರು.
ಅಭಿನಂದನೆ ಸ್ವೀಕರಿಸಿದ ಹಿಮಕರ ಎಂ ರವರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಳ್ಳುವುದರೊಂದಿಗೆ ತಮಗೆ ಸಹಕರಿಸಿದವರನ್ನು ನೆನಪಿಸಿಕೊಂಡವರು. ವಸತಿ ನಿಲಯದ ಸಿಬ್ಬಂದಿ ವರ್ಗದವರಾದ ಸುವಾಸಿನಿ, ಸತ್ಯವತಿ, ಹೇಮ, ಅಕ್ಷತ, ಗಾಯತ್ರಿ, ವಸತಿ ನಿಲಯದ ನಾಯಕಿ ಅಶ್ವಿನಿ ಎ ವಿ, ಉಪನಾಯಕಿ ಮೌನ ಹೆಚ್ ಜಿ ಮೊದಲಾದವರು ಉಪಸ್ಥಿತರಿದ್ದರು.
ರಶ್ಮಿತಾ ಮತ್ತು ತಂಡ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ಸ್ವಾಗತಿಸಿ, ಕೃತಿ ಕೆ ಹೆಚ್ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…