Advertisement
MIRROR FOCUS

#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

Share

ಸುಳ್ಯ ತಾಲೂಕಿನಲ್ಲಿ ತರಕಾರಿ ಬೀಜಗಳ ವಿತರಣೆ  ವಿವಿಧ ಸಹಕಾರಿ ಸಂಘಗಳ ಸಹಕಾರದೊಂದಿಗೆ ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ  ನಡೆಯುತ್ತಿದೆ. ವಿವಿಧ ಬಗೆಯ ತರಕಾರಿ ಬೀಜಗಳ ವಿತರಣೆ ಮಾಡಲಾಗುತ್ತಿದ್ದು ಆತ್ಮನಿರ್ಭರ ಭಾರತ ಹಾಗೂ ಸ್ವಾವಲಂಬಿ ಗ್ರಾಮದ ಕನಸಿನ ಬೀಜ ಬಿತ್ತಲಾಗುತ್ತಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಗುತ್ತಿಗಾರು, ಪಂಜ , ಏನೆಕಲ್ಲು, ಕಳಂಜ-ಬಾಳಿಲ,  ಮೊದಲಾದ ಕಡೆಗಳಲ್ಲಿ ತರಕಾರಿ ಬೀಜ ವಿತರಣೆ ನಡೆಯುತ್ತಿದೆ.

Advertisement
Advertisement
Advertisement
Advertisement

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ , ಕುಕ್ಕುಜಡ್ಕಮತ್ತು ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು-ಪಡ್ನೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಅಮರ ಸಹಕಾರ ಸಭಾಭವನದಲ್ಲಿ ಜರುಗಿತು.

Advertisement

ಹರಿಶ್ಚಂದ್ರ ಗೌಡ ಮೊಂಟಡ್ಕ ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು ಇವರು ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗ ಗ್ರಾಮ ವಿಕಾಸ ಸಂಯೋಜಕ ಪ್ರವೀಣ್ ಸರಳಾಯ,ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಸಾವಯವ ಬದುಕಿನ ಜೊತೆ ವಿಷಮುಕ್ತ ಬದುಕು ನಮ್ಮದಾಗಬೇಕು, ಅಲ್ಲದೆ ತರಕಾರಿ ಬೆಳೆಯ ಮೂಲಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಬೇಕಾಗಿದೆ ಎಂದರು.

Advertisement

ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸೀತಾ ಹೆಚ್ ,ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ಪಿ. ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್ ಪೊಯ್ಯೆಮಜಲು, ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿದರು. ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು.

Advertisement

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

3 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

4 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

4 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago