Advertisement
MIRROR FOCUS

#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

Share

ಸುಳ್ಯ ತಾಲೂಕಿನಲ್ಲಿ ತರಕಾರಿ ಬೀಜಗಳ ವಿತರಣೆ  ವಿವಿಧ ಸಹಕಾರಿ ಸಂಘಗಳ ಸಹಕಾರದೊಂದಿಗೆ ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ  ನಡೆಯುತ್ತಿದೆ. ವಿವಿಧ ಬಗೆಯ ತರಕಾರಿ ಬೀಜಗಳ ವಿತರಣೆ ಮಾಡಲಾಗುತ್ತಿದ್ದು ಆತ್ಮನಿರ್ಭರ ಭಾರತ ಹಾಗೂ ಸ್ವಾವಲಂಬಿ ಗ್ರಾಮದ ಕನಸಿನ ಬೀಜ ಬಿತ್ತಲಾಗುತ್ತಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಗುತ್ತಿಗಾರು, ಪಂಜ , ಏನೆಕಲ್ಲು, ಕಳಂಜ-ಬಾಳಿಲ,  ಮೊದಲಾದ ಕಡೆಗಳಲ್ಲಿ ತರಕಾರಿ ಬೀಜ ವಿತರಣೆ ನಡೆಯುತ್ತಿದೆ.


ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ , ಕುಕ್ಕುಜಡ್ಕಮತ್ತು ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು-ಪಡ್ನೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಅಮರ ಸಹಕಾರ ಸಭಾಭವನದಲ್ಲಿ ಜರುಗಿತು.

ಹರಿಶ್ಚಂದ್ರ ಗೌಡ ಮೊಂಟಡ್ಕ ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು ಇವರು ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗ ಗ್ರಾಮ ವಿಕಾಸ ಸಂಯೋಜಕ ಪ್ರವೀಣ್ ಸರಳಾಯ,ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಸಾವಯವ ಬದುಕಿನ ಜೊತೆ ವಿಷಮುಕ್ತ ಬದುಕು ನಮ್ಮದಾಗಬೇಕು, ಅಲ್ಲದೆ ತರಕಾರಿ ಬೆಳೆಯ ಮೂಲಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಬೇಕಾಗಿದೆ ಎಂದರು.

ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸೀತಾ ಹೆಚ್ ,ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ಪಿ. ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್ ಪೊಯ್ಯೆಮಜಲು, ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿದರು. ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

5 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

1 day ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 days ago