ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು.
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯರು ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿಯರಾದ ಸಾವಿತ್ರಿ, ಹರ್ಷಿತ ಉಪಸ್ಥಿತರಿದ್ದರು.
ವಿದ್ಯಾರ್ಥಿ ಶ್ರೀ ರಾಮ ಸ್ವಾಗತಿಸಿ, ಹಲೀಮತ್ ಅಜ್ಮೀನ ವಂದಿಸಿದರು. ವಿದ್ಯಾರ್ಥಿನಿ ಸಾಧನ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…