ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು.
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯರು ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿಯರಾದ ಸಾವಿತ್ರಿ, ಹರ್ಷಿತ ಉಪಸ್ಥಿತರಿದ್ದರು.
ವಿದ್ಯಾರ್ಥಿ ಶ್ರೀ ರಾಮ ಸ್ವಾಗತಿಸಿ, ಹಲೀಮತ್ ಅಜ್ಮೀನ ವಂದಿಸಿದರು. ವಿದ್ಯಾರ್ಥಿನಿ ಸಾಧನ ನಿರೂಪಿಸಿದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…