ಸುಳ್ಯ: ನರೇಂದ್ರ ಮೋದಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡ ಸಮಯದಲ್ಲಿ ಆದರ್ಶ ಗ್ರಾಮದ ಪರಿಕಲ್ಪನೆ ಎಂಬ ಹೆಸರಿನ ಬಹುದೊಡ್ಡ ನಾಟಕದ ವಸ್ತುವಾಗಿದೆ.ಅದರಲ್ಲಿ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಆಯ್ದುಕೊಂಡ ಸುಳ್ಯ ತಾಲೂಕಿನ ಬಳ್ಪ ಗ್ರಾಮ ಕೂಡ ಹೊರತಾಗಿಲ್ಲ ಎಂಬ ವಾಸ್ತವ ಇದೀಗ ಜಗಜ್ಜಾಹಿರಾಗಿದೆ ಎಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಾರೋಗ್ಯ ಪೀಡಿತ ಒಬ್ಬ ರೋಗಿಯನ್ನು ರಸ್ತೆ ವ್ಯವಸ್ಥೆ ಇಲ್ಲದೆ ಮರದ ಚಯರ್ ನಲ್ಲಿ ಕೂರಿಸಿ ಹೊತ್ತುಕೊಂಡು ಹೋಗುವಂತಹ ಪರಿಸ್ಥಿತಿ ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಾಣ ಮಾಡಿದ ಬುದ್ದಿವಂತರ ಜಿಲ್ಲೆಯ ಒಂದು ಆದರ್ಶ ಗ್ರಾಮದಲ್ಲಿಯೇ ಇರುವುದಾದರೆ,ಇಡೀ ದೇಶದಲ್ಲಿ ಉಳಿದ ಆದರ್ಶ ಮತ್ತು ಸಾಮಾನ್ಯ ಗ್ರಾಮಗಳ ಅವ್ಯವಸ್ಥೆ ಯಾವ ರೀತಿಯಲ್ಲಿ ಇರಬಹುದು ಎಂದು ಗಂಭೀರವಾಗಿ ಆಲೋಚಿಸಬೇಕಾದ ವಿಚಾರವಾಗಿದೆ. ಕಳೆದ ಐದು ವರ್ಷಗಳಿಂದ ಯಾವುದೇ ಅಬಿವೃದ್ದಿಯಾಗಿಲ್ಲ ಎಂಬ ವಾಸ್ತವ ಇದಾಗಿದೆ.
ಒಂದು ವೇಳೆ ಬಿಜೆಪಿಗೆ ಅಬಿವೃದ್ದಿ ರಾಜಕಾರಣ ಮಾಡುವುದಿದ್ದರೆ ನಳಿನ್ ಕುಮಾರ್ ರಂತಹ ಅಸಮರ್ಥ ವ್ಯಕ್ತಿಯನ್ನು ಸಂಸದರನ್ನಾಗಿ ಮತ್ತು ಬಿಜೆಪಿಯ ರಾಜ್ಯಾದ್ಯಕ್ಷರನ್ನಾಗಿ ಮಾಡಿ ಮತದಾರರಿಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಾ ಇರಲಿಲ್ಲ.ಆದುದರಿಂದ ಮತದಾರರು ಮುಂದಿನ ದಿನಗಳಲ್ಲಿ ಬಿಜೆಪಿಯ ಸುಳ್ಳು ಆಶ್ವಾಸನೆ ಮತ್ತು ಭರವಸೆಗಳಿಗೆ ಮಾರುಹೋಗದೆ ಗಂಭೀರವಾಗಿ ಆಲೋಚಿಸಿ ಪರ್ಯಾಯ ರಾಜಕೀಯದ ಬಗ್ಗೆ ಆಲೋಚಿಸಬೇಕೆಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…