ಸುಳ್ಯ: ನರೇಂದ್ರ ಮೋದಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡ ಸಮಯದಲ್ಲಿ ಆದರ್ಶ ಗ್ರಾಮದ ಪರಿಕಲ್ಪನೆ ಎಂಬ ಹೆಸರಿನ ಬಹುದೊಡ್ಡ ನಾಟಕದ ವಸ್ತುವಾಗಿದೆ.ಅದರಲ್ಲಿ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಆಯ್ದುಕೊಂಡ ಸುಳ್ಯ ತಾಲೂಕಿನ ಬಳ್ಪ ಗ್ರಾಮ ಕೂಡ ಹೊರತಾಗಿಲ್ಲ ಎಂಬ ವಾಸ್ತವ ಇದೀಗ ಜಗಜ್ಜಾಹಿರಾಗಿದೆ ಎಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಾರೋಗ್ಯ ಪೀಡಿತ ಒಬ್ಬ ರೋಗಿಯನ್ನು ರಸ್ತೆ ವ್ಯವಸ್ಥೆ ಇಲ್ಲದೆ ಮರದ ಚಯರ್ ನಲ್ಲಿ ಕೂರಿಸಿ ಹೊತ್ತುಕೊಂಡು ಹೋಗುವಂತಹ ಪರಿಸ್ಥಿತಿ ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಾಣ ಮಾಡಿದ ಬುದ್ದಿವಂತರ ಜಿಲ್ಲೆಯ ಒಂದು ಆದರ್ಶ ಗ್ರಾಮದಲ್ಲಿಯೇ ಇರುವುದಾದರೆ,ಇಡೀ ದೇಶದಲ್ಲಿ ಉಳಿದ ಆದರ್ಶ ಮತ್ತು ಸಾಮಾನ್ಯ ಗ್ರಾಮಗಳ ಅವ್ಯವಸ್ಥೆ ಯಾವ ರೀತಿಯಲ್ಲಿ ಇರಬಹುದು ಎಂದು ಗಂಭೀರವಾಗಿ ಆಲೋಚಿಸಬೇಕಾದ ವಿಚಾರವಾಗಿದೆ. ಕಳೆದ ಐದು ವರ್ಷಗಳಿಂದ ಯಾವುದೇ ಅಬಿವೃದ್ದಿಯಾಗಿಲ್ಲ ಎಂಬ ವಾಸ್ತವ ಇದಾಗಿದೆ.
ಒಂದು ವೇಳೆ ಬಿಜೆಪಿಗೆ ಅಬಿವೃದ್ದಿ ರಾಜಕಾರಣ ಮಾಡುವುದಿದ್ದರೆ ನಳಿನ್ ಕುಮಾರ್ ರಂತಹ ಅಸಮರ್ಥ ವ್ಯಕ್ತಿಯನ್ನು ಸಂಸದರನ್ನಾಗಿ ಮತ್ತು ಬಿಜೆಪಿಯ ರಾಜ್ಯಾದ್ಯಕ್ಷರನ್ನಾಗಿ ಮಾಡಿ ಮತದಾರರಿಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಾ ಇರಲಿಲ್ಲ.ಆದುದರಿಂದ ಮತದಾರರು ಮುಂದಿನ ದಿನಗಳಲ್ಲಿ ಬಿಜೆಪಿಯ ಸುಳ್ಳು ಆಶ್ವಾಸನೆ ಮತ್ತು ಭರವಸೆಗಳಿಗೆ ಮಾರುಹೋಗದೆ ಗಂಭೀರವಾಗಿ ಆಲೋಚಿಸಿ ಪರ್ಯಾಯ ರಾಜಕೀಯದ ಬಗ್ಗೆ ಆಲೋಚಿಸಬೇಕೆಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…