ಆಧಾರ್ ಕಾರ್ಡ್ ತಿದ್ದುಪಡಿ, ರಕ್ತದಾನ ಶಿಬಿರ, ಮಿಂಚಿನ ನೋಂದಣಿ, ಮಾಹಿತಿ ಪ್ರದರ್ಶನ

January 6, 2020
7:15 PM

ಸುಳ್ಯ: ರಕ್ತದಾನ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ, ಮತದಾರರ ಮಿಂಚಿನ ನೋಂದಣಿ, ಇಲಾಖೆಗಳ ಮಾಹಿತಿ ಪ್ರದರ್ಶನ.. ಹೀಗೆ ಹಲವು ಮಾಹಿತಿ ಮತ್ತು ಸೇವೆಗಳು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಜನರಿಗೆ ದೊರೆಯಿತು.

ಶಾಲಾ ಕೊಠಡಿಯಲ್ಲಿ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಎ.ಜೆ.ಆಸ್ಪತ್ರೆ ಸಹಭಾಗಿತ್ವದಲ್ಲಿ ವೈದ್ಯಕೀಯ ಶಿಬಿರ ನಡೆಯಿತು. ಹಲವು ವಿಭಾಗದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. 138 ಕ್ಕೂ ಅಧಿಕ ಮಂದಿ ತಪಾಸಣೆ ನಡೆಸಿದರು. ಎಜೆ ಆಸ್ಪತ್ರೆಯ ನುರಿತ ತಜ್ಞರು ತಪಾಸಣೆ ನಡೆಸಿದರು. ಶಾಸಕ ಎಸ್.ಅಂಗಾರ ಮತ್ತು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಆರೋಗ್ಯ ತಪಾಸಣೆ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 35 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.

75 ಆಧಾರ್ ತಿದ್ದುಪಡಿ: ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ನಡೆಯಿತು. ಸುಮಾರು 75 ಮಂದಿ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಮಡಪ್ಪಾಡಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಚುನಾವಣಾ ಆಯೋಗದ ವತಿಯಿಂದ ಮತದಾರರ ಮಿಂಚಿನ ನೋಂದಣಿ ಪ್ರಕ್ರಿಯೆ ನಡೆಯಿತು. ಗ್ರಾಮದ ಹಲವರು ಹೆಸರು ತಿದ್ದುಪಡಿ, ಸೇರ್ಪಡೆಗೆ ಅರ್ಜಿ ಸಲ್ಲಿಸಿದರು. ವಿವಿಧ ಇಲಾಖೆಗಳ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿತ್ತು. ಹೀಗಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಆಯಾಮಗಳಿಂದ ಗ್ರಾಮಸ್ಥರಿಗೆ ಪ್ರಯೋಜನ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror