ಸುದ್ದಿಗಳು

ಆಧಾರ್ ಕಾರ್ಡ್ ತಿದ್ದುಪಡಿ, ರಕ್ತದಾನ ಶಿಬಿರ, ಮಿಂಚಿನ ನೋಂದಣಿ, ಮಾಹಿತಿ ಪ್ರದರ್ಶನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ರಕ್ತದಾನ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ, ಮತದಾರರ ಮಿಂಚಿನ ನೋಂದಣಿ, ಇಲಾಖೆಗಳ ಮಾಹಿತಿ ಪ್ರದರ್ಶನ.. ಹೀಗೆ ಹಲವು ಮಾಹಿತಿ ಮತ್ತು ಸೇವೆಗಳು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಜನರಿಗೆ ದೊರೆಯಿತು.

Advertisement

ಶಾಲಾ ಕೊಠಡಿಯಲ್ಲಿ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಎ.ಜೆ.ಆಸ್ಪತ್ರೆ ಸಹಭಾಗಿತ್ವದಲ್ಲಿ ವೈದ್ಯಕೀಯ ಶಿಬಿರ ನಡೆಯಿತು. ಹಲವು ವಿಭಾಗದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. 138 ಕ್ಕೂ ಅಧಿಕ ಮಂದಿ ತಪಾಸಣೆ ನಡೆಸಿದರು. ಎಜೆ ಆಸ್ಪತ್ರೆಯ ನುರಿತ ತಜ್ಞರು ತಪಾಸಣೆ ನಡೆಸಿದರು. ಶಾಸಕ ಎಸ್.ಅಂಗಾರ ಮತ್ತು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಆರೋಗ್ಯ ತಪಾಸಣೆ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 35 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.

75 ಆಧಾರ್ ತಿದ್ದುಪಡಿ: ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ನಡೆಯಿತು. ಸುಮಾರು 75 ಮಂದಿ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಮಡಪ್ಪಾಡಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಚುನಾವಣಾ ಆಯೋಗದ ವತಿಯಿಂದ ಮತದಾರರ ಮಿಂಚಿನ ನೋಂದಣಿ ಪ್ರಕ್ರಿಯೆ ನಡೆಯಿತು. ಗ್ರಾಮದ ಹಲವರು ಹೆಸರು ತಿದ್ದುಪಡಿ, ಸೇರ್ಪಡೆಗೆ ಅರ್ಜಿ ಸಲ್ಲಿಸಿದರು. ವಿವಿಧ ಇಲಾಖೆಗಳ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿತ್ತು. ಹೀಗಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಆಯಾಮಗಳಿಂದ ಗ್ರಾಮಸ್ಥರಿಗೆ ಪ್ರಯೋಜನ ನೀಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

3 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

5 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

8 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

9 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

9 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

9 hours ago