Advertisement
ಸುದ್ದಿಗಳು

ಆಧಾರ್ ಕಾರ್ಡ್ ತಿದ್ದುಪಡಿ, ರಕ್ತದಾನ ಶಿಬಿರ, ಮಿಂಚಿನ ನೋಂದಣಿ, ಮಾಹಿತಿ ಪ್ರದರ್ಶನ

Share

ಸುಳ್ಯ: ರಕ್ತದಾನ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ, ಮತದಾರರ ಮಿಂಚಿನ ನೋಂದಣಿ, ಇಲಾಖೆಗಳ ಮಾಹಿತಿ ಪ್ರದರ್ಶನ.. ಹೀಗೆ ಹಲವು ಮಾಹಿತಿ ಮತ್ತು ಸೇವೆಗಳು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಜನರಿಗೆ ದೊರೆಯಿತು.

ಶಾಲಾ ಕೊಠಡಿಯಲ್ಲಿ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಎ.ಜೆ.ಆಸ್ಪತ್ರೆ ಸಹಭಾಗಿತ್ವದಲ್ಲಿ ವೈದ್ಯಕೀಯ ಶಿಬಿರ ನಡೆಯಿತು. ಹಲವು ವಿಭಾಗದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. 138 ಕ್ಕೂ ಅಧಿಕ ಮಂದಿ ತಪಾಸಣೆ ನಡೆಸಿದರು. ಎಜೆ ಆಸ್ಪತ್ರೆಯ ನುರಿತ ತಜ್ಞರು ತಪಾಸಣೆ ನಡೆಸಿದರು. ಶಾಸಕ ಎಸ್.ಅಂಗಾರ ಮತ್ತು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಆರೋಗ್ಯ ತಪಾಸಣೆ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 35 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.

75 ಆಧಾರ್ ತಿದ್ದುಪಡಿ: ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ನಡೆಯಿತು. ಸುಮಾರು 75 ಮಂದಿ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಮಡಪ್ಪಾಡಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಚುನಾವಣಾ ಆಯೋಗದ ವತಿಯಿಂದ ಮತದಾರರ ಮಿಂಚಿನ ನೋಂದಣಿ ಪ್ರಕ್ರಿಯೆ ನಡೆಯಿತು. ಗ್ರಾಮದ ಹಲವರು ಹೆಸರು ತಿದ್ದುಪಡಿ, ಸೇರ್ಪಡೆಗೆ ಅರ್ಜಿ ಸಲ್ಲಿಸಿದರು. ವಿವಿಧ ಇಲಾಖೆಗಳ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿತ್ತು. ಹೀಗಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಆಯಾಮಗಳಿಂದ ಗ್ರಾಮಸ್ಥರಿಗೆ ಪ್ರಯೋಜನ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

6 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

7 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

7 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

12 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

15 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

19 hours ago